ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ (Swamiji) ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ದನವೊಂದು ದಿಢೀರ್ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್ ವಾಹನ ಬ್ರೇಕ್ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ ಮತ್ತೊಂದು ಕಾರು ಸ್ವಾಮೀಜಿ ಇದ್ದ ಕಾರಿಗೆ ಅಪ್ಪಳಿಸಿದೆ. ಮೂರು ವಾಹನಗಳು ಜಖಂ ಆಗಿವೆ.

ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ಚಿಕ್ಕಮಗಳೂರಿನಿಂದ ಶಿರಸಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಶ್ರೀಗಳು ಮತ್ತು ಕಾರಿನಲ್ಲಿದ್ದ ಉಳಿದವರು ಪಾರಾಗಿದ್ದಾರೆ. ಶ್ರೀಗಳು ಬದಲಿ ಕಾರಿನಲ್ಲಿ ಪ್ರಯಾಣ ಮುಂದುವರೆಸಿದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಚಂದ್ರಗುತ್ತಿ ಅಭಿವೃದ್ಧಿಗೆ ಯೋಜನೆ ಸಿದ್ಧ, ಬಜೆಟ್ನಲ್ಲಿ ಮಹತ್ವದ ನಿರ್ಧಾರ ಪ್ರಕಟ, ಏನದು?
LATEST NEWS
- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು















