ಶಿವಮೊಗ್ಗ : ಕಿಡ್ನಿ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿರುವ ಎನ್.ಯು ಆಸ್ಪತ್ರೆ ಈಗ ಶಿವಮೊಗ್ಗ ಕಿಡ್ನಿ (Kidney) ಆಸ್ಪತ್ರೆಯಾಗಿ ಮರುನಾಮಕರಣಗೊಂಡಿದೆ. ಕಿಡ್ನಿ ದಿನದ ಅಂಗವಾಗಿ ಇವತ್ತು ನೂತನ ಹೆಸರು ಅನಾವರಣ ಮಾಡಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಮರುನಾಮಕರಣಕ್ಕೆ ಕಾರಣ ನೀಡಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ನವಜಾತ ಶಿಶುಗಳಿಂದ ಎಲ್ಲ ವಯೋಮಾನದವರಿಗೆ ಕಿಡ್ನಿ ಸಮಸ್ಯೆ ಆಗುತ್ತಿದೆ. ಡಯಾಬೆಟಿಕ್ ಕಿಡ್ನಿ ಸಮಸ್ಯೆ ಈಗ ಉಲ್ಬಣಗೊಂಡಿದೆ. ಜೀವನಶೈಲಿಯೆ ಇದಕ್ಕೆ ಮೂಲ ಕಾರಣ. ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಕಿಡ್ನಿ ಸಮಸ್ಯೆಯಿಂದ ಪಾರಾಗಬಹುದು. ಎನ್ಯು ಆಸ್ಪತ್ರೆ ಕಿಡ್ನಿ ಚಿಕಿತ್ಸೆಗೆ ಸೀಮಿತ. ಇದು ಹೆಚ್ಚು ಜನರಿಗೆ ತಲುಪಲಿ ಎಂಬ ಕಾರಣಕ್ಕೆ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗಿದೆ.
– ಡಾ. ಪ್ರದೀಪ್.ಎಂ.ಜಿ, ಯುರಾಲಜಿಸ್ಟ್ ಮತ್ತು ಕಿಡ್ನಿ ಟ್ರಾನ್ಸ್ಪ್ಲಾಂಟ್ ಸರ್ಜನ್

ಮಧ್ಯ ಕರ್ನಾಟಕದಲ್ಲಿ ಎನ್.ಯು. ಆಸ್ಪತ್ರೆಯಲ್ಲಿ ಕಿಡ್ನಿಗೆ ಅತ್ಯುತ್ತಮ ಚಕಿತ್ಸೆ ನೀಡಲಾಗುತ್ತಿದೆ. ಇದು ಸಾಮಾನ್ಯ ಆಸ್ಪತ್ರೆಯಂತಲ್ಲ. ಈ ವಿಷಯವನ್ನು ಜನರಿಗೆ ಮನದಟ್ಟು ಮಾಡಲು ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂದು ಮರು ನಾಮಕರಣ ಮಾಡಲಾಗಿದೆ. ಇಲ್ಲಿ ಕಳೆದ ಐದು ವರ್ಷದಲ್ಲಿ 18 ಕಿಡ್ನಿ ಟ್ರಾನ್ಸ್ಪ್ಲಾಂಟ್ ಮಾಡಲಾಗಿದೆ. ಕಿಡ್ನಿ ಆರೈಕೆಯಲ್ಲಿ ಸುಧಾರಿತ ಚಿಕಿತ್ಸೆಯನ್ನು ನೀಡುವ ಮೂಲಕ ಕೊನೆಯ ಹಂತದ ಮೂತ್ರಪಿಂಡ ಕಾಯಿಲೆ ಹೊಂದಿರುವ ರೋಗಿಗಳಿಗೂ ಹೊಸ ಭರವಸೆ ತುಂಬಿದೆ.
– ಡಾ. ಪ್ರವೀಣ್ ಮಾಳವದೆ, ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್

ಕಿಡ್ನಿ (Kidney) ಚಿಕಿತ್ಸೆಗೆ ಈ ಭಾಗದ ಜನರು ಮಣಿಪಾಲ, ಬೆಂಗಳೂರಿನ ವಿವಿಧ ಆಸ್ಪತ್ರೆಗೆ ತೆರಳುತ್ತಿದ್ದರು. ಎನ್.ಯು. ಆಸ್ಪತ್ರೆ ಸ್ಥಾಪನೆಯಾದಾಗಿನಿಂದ ಶಿವಮೊಗ್ಗದಲ್ಲಿಯೇ ಕಡಿಮೆ ವೆಚ್ಚದಲ್ಲಿ ಅತ್ಯಾಧುನಿಕ ಚಿಕಿತ್ಸೆ ದೊರೆಯುತ್ತಿದೆ. ಶಿವಮೊಗ್ಗ ಕಿಡ್ನಿ ಆಸ್ಪತ್ರೆಯು (ಎನ್.ಯು ಆಸ್ಪತ್ರೆ) ರಕ್ತದ ಗುಂಪು ಹೊಂದಾಣಿಕೆಯಾಗದವರಿಗೂ ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್ಪ್ಲಾಂಟ್ ಮಾಡಿದ ಮಲೆನಾಡು ಭಾಗದ ಮೊದಲ ಆಸ್ಪತ್ರೆಯಾಗಿದೆ. ಇನ್ನು ಹೆಚ್ಚಿನ ಜನರಿಗೆ ಸೇವೆ ವಿಸ್ತರಿಸಲು ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅರಿವಳಿಕೆ ತಜ್ಞರಾದ ಡಾ. ಕಾರ್ತಿಕ್ ಎಸ್.ಎಲ್ ಮತ್ತು ಡಾ. ಆಕಾಶ್ ಜೆ.ಎಸ್ ಉಪಸ್ಥಿತರಿದ್ದರು.

ಇದನ್ನೂ ಓದಿ » ಮುಸ್ಲಿಮ್ ಬಜೆಟ್ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು, ಏನಂದ್ರು? ಇಲ್ಲಿದೆ ನಾಲ್ಕು ಪಾಯಿಂಟ್
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





