| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ : ಹೋಳಿ (Holi) ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮನ್ಮಥ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ಹಲವು ಕಡೆ ಗುರುವಾರ ಮನ್ಮಥನ ಮೂರ್ತಿಗಳನ್ನು ಸ್ಥಾಪಿಸಿ ಪೂಜಿಸಲಾಗಿದೆ. ಹಬ್ಬದ ನಂತರ ಕಾಮದಹನ ಮಾಡಲಾಗುತ್ತದೆ.
ಶಿವಮೊಗ್ಗದಲ್ಲಿ ಮಾ.15ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಸಂಭ್ರಮದ ಹೋಳಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಗೋಪಿ ವೃತ್ತದಲ್ಲಿ ರೈನ್ ಡಾನ್ಸ್ ಆಯೋಜಿಸಲಾಗಿದೆ.
ಕಾಮಣ್ಣನ ಪ್ರತಿಮೆ ಪ್ರತಿಷ್ಠಾಪನೆ
![]()
ಗಾಂಧಿ ಬಜಾರ್ನ ಬಸವೇಶ್ವರ ದೇವಸ್ಥಾನ, ತುಳಜಾ ಭವಾನಿ ದೇಗುಲ, ಕುಂಬಾರ ಬೀದಿ, ಬಿ.ಬಿ.ರಸ್ತೆಯಲ್ಲಿ ಕಾಮಣ್ಣನ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ಶನಿವಾರ ಈ ಮೂರ್ತಿಗಳ ದಹನ ಮಾಡಲಾಗುತ್ತದೆ. ಇದಕ್ಕೂ ಮುನ್ನ ಮೆರವಣಿಗೆ ನಡೆಯಲಿದೆ.
![]()
ಭದ್ರಾವತಿಯಲ್ಲೂ ಮನ್ಮಥ ಪ್ರತಿಷ್ಠಾಪನೆ
ಭದ್ರಾವತಿ ನಗರದ ವಿವಿಧೆಡೆಯು ಮನ್ಮಥನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಭೂತನಗುಡಿಯ ಶ್ರೀಕೃಷ್ಣ ರುಕ್ಮಿಣಿ ದೇಗುಲದ ಬಳಿ ಕೋಟ್, ಕನ್ನಡಕ ಧರಿಸಿರುವ ಕಾಮಣ್ಣನನ್ನು ಪ್ರತಿಷ್ಠಾಪಿಸಲಾಗಿದೆ. ಬ್ರಾಹ್ಮಣರ ಬೀದಿ, ಶ್ರೀ ಲಕ್ಷ್ಮಿ ನರಸಿಂಹ ದೇಗುಲದ ಸಮೀಪ, ಕುಂಬಾರ ಬೀದಿಯಲ್ಲು ಮನ್ಮಥನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಶನಿವಾರ ಈ ಮೂರ್ತಿಗಳ ಮೆರವಣಿಗೆ ನಡೆಸಿ, ದಹಿಸಲಾಗುತ್ತದೆ.

ಸಾಗರದಲ್ಲೂ ಮನ್ಮಥನ ಪ್ರತಿಷ್ಠಾಪನೆ
ಸಾಗರದ ಅಶೋಕ ವೃತ್ತದಲ್ಲಿ ಅಶೋಕ ಯುವ ಸಂಘದಿಂದ ಮನ್ಮಥನ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಇನ್ನು, ತಾಲೂಕಿನ ವಿವಿಧೆಡೆ ಪ್ರಮುಖ ವೃತ್ತಗಳಲ್ಲಿ ರತಿ ಮನ್ಮಥರ ಪ್ರತಿಕೃತಿ ಪ್ರತಿಷ್ಠಾಪಿಸಲಾಗಿದೆ. ಮಾರ್ಚ್ 14ರ ಮಧ್ಯಾಹ್ನ 1 ಗಂಟೆಯವರೆಗೂ ಬಣ್ಣ ಎರೆಚುವ ಓಕಳಿಯಾಟಕ್ಕೆ (Holi) ಅವಕಾಶ ನೀಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹೋಳಿ ಆಚರಿಸಬೇಕು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಹಿನ್ನೀರಿಗೆ ಹಾರಿ ರೈತ ಆತ್ಮಹತ್ಯೆ, ಕಾರಣವೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()