ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ : ಹೋಳಿ (Holi) ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮನ್ಮಥ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ಹಲವು ಕಡೆ ಗುರುವಾರ ಮನ್ಮಥನ ಮೂರ್ತಿಗಳನ್ನು ಸ್ಥಾಪಿಸಿ ಪೂಜಿಸಲಾಗಿದೆ. ಹಬ್ಬದ ನಂತರ ಕಾಮದಹನ ಮಾಡಲಾಗುತ್ತದೆ.

ಶಿವಮೊಗ್ಗದಲ್ಲಿ ಮಾ.15ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಸಂಭ್ರಮದ ಹೋಳಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಗೋಪಿ ವೃತ್ತದಲ್ಲಿ ರೈನ್‌ ಡಾನ್ಸ್‌ ಆಯೋಜಿಸಲಾಗಿದೆ.

ಕಾಮಣ್ಣನ ಪ್ರತಿಮೆ ಪ್ರತಿಷ್ಠಾಪನೆ

all-set-for-holi-festival-in-Shimoga-city

ಗಾಂಧಿ ಬಜಾರ್‌ನ ಬಸವೇಶ್ವರ ದೇವಸ್ಥಾನ, ತುಳಜಾ ಭವಾನಿ ದೇಗುಲ, ಕುಂಬಾರ ಬೀದಿ, ಬಿ.ಬಿ.ರಸ್ತೆಯಲ್ಲಿ ಕಾಮಣ್ಣನ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ಶನಿವಾರ ಈ ಮೂರ್ತಿಗಳ ದಹನ ಮಾಡಲಾಗುತ್ತದೆ. ಇದಕ್ಕೂ ಮುನ್ನ ಮೆರವಣಿಗೆ ನಡೆಯಲಿದೆ.

NFC-Chicken-Kabab

ಭದ್ರಾವತಿಯಲ್ಲೂ ಮನ್ಮಥ ಪ್ರತಿಷ್ಠಾಪನೆ

ಭದ್ರಾವತಿ ನಗರದ ವಿವಿಧೆಡೆಯು ಮನ್ಮಥನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಭೂತನಗುಡಿಯ ಶ್ರೀಕೃಷ್ಣ ರುಕ್ಮಿಣಿ ದೇಗುಲದ ಬಳಿ ಕೋಟ್‌, ಕನ್ನಡಕ ಧರಿಸಿರುವ ಕಾಮಣ್ಣನನ್ನು ಪ್ರತಿಷ್ಠಾಪಿಸಲಾಗಿದೆ. ಬ್ರಾಹ್ಮಣರ ಬೀದಿ, ಶ್ರೀ ಲಕ್ಷ್ಮಿ ನರಸಿಂಹ ದೇಗುಲದ ಸಮೀಪ, ಕುಂಬಾರ ಬೀದಿಯಲ್ಲು ಮನ್ಮಥನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಶನಿವಾರ ಈ ಮೂರ್ತಿಗಳ ಮೆರವಣಿಗೆ ನಡೆಸಿ, ದಹಿಸಲಾಗುತ್ತದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಸಾಗರದಲ್ಲೂ ಮನ್ಮಥನ ಪ್ರತಿಷ್ಠಾಪನೆ

ಸಾಗರದ ಅಶೋಕ ವೃತ್ತದಲ್ಲಿ ಅಶೋಕ ಯುವ ಸಂಘದಿಂದ ಮನ್ಮಥನ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಇನ್ನು, ತಾಲೂಕಿನ ವಿವಿಧೆಡೆ ಪ್ರಮುಖ ವೃತ್ತಗಳಲ್ಲಿ ರತಿ ಮನ್ಮಥರ ಪ್ರತಿಕೃತಿ ಪ್ರತಿಷ್ಠಾಪಿಸಲಾಗಿದೆ. ಮಾರ್ಚ್ 14ರ ಮಧ್ಯಾಹ್ನ 1 ಗಂಟೆಯವರೆಗೂ ಬಣ್ಣ ಎರೆಚುವ ಓಕಳಿಯಾಟಕ್ಕೆ (Holi) ಅವಕಾಶ ನೀಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹೋಳಿ ಆಚರಿಸಬೇಕು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಹಿನ್ನೀರಿಗೆ ಹಾರಿ ರೈತ ಆತ್ಮಹತ್ಯೆ, ಕಾರಣವೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment