ಶಿವಮೊಗ್ಗ : ಊಟದ ಹಣ (Money) ಕೊಡುವಂತೆ ಕೇಳಿದ ಹೊಟೇಲ್ ಮಾಲೀಕನಿಗೆ ಗ್ರಾಹಕನೊಬ್ಬ ಚಾಕುವಿನಿಂದ ಇರುದಿದ್ದಾನೆ. ಹೊಟೇಲ್ ಮಾಲೀಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಹೊಟೇಲ್ ಮಾಲೀಕ ಕೃಷ್ಣಪ್ಪ ಗಾಯಗೊಂಡಿದ್ದಾರೆ. ಶಿವಮೊಗ್ಗ – ಹೊನ್ನಾಳಿ ರಸ್ತೆಯ ದೀಪಕ್ ವೈನ್ ಸ್ಟೋರ್ ಪಕ್ಕದಲ್ಲಿರುವ ಖುಷಿ ಫಾಸ್ಟ್ ಫುಡ್ ಹೊಟೇಲ್ನಲ್ಲಿ ಘಟನೆ ಸಂಭವಿಸಿದೆ.
ಕುತ್ತಿಗೆಗೆ ಚಾಕು ಇರಿದ ಗ್ರಾಹಕ
ಕೃಷ್ಣಪ್ಪ ಅವರ ಫಾಸ್ಟ್ ಫುಡ್ ಹೊಟೇಲ್ಗೆ ಬಂದ ವ್ಯಕ್ತಿಯೊಬ್ಬ ಮುದ್ದೆ ಮತ್ತು ತಲೆ ಮಟನ್ ಸೇವಿಸಿದ್ದ. ಬಿಲ್ (Money) ಪಾವತಿಸುವಂತೆ ಕೃಷ್ಣಪ್ಪ ಕೇಳಿದಾಗ, ಕೆರಳಿದ ಆತ ಮಾತಿಗೆ ಮಾತು ಬೆಳೆಸಿ ತನ್ನ ಜೇಬಿನಲ್ಲಿದ್ದ ಚಾಕು ತೆಗೆದು ಕುತ್ತಿಗೆಗೆ ಇರಿದಿದ್ದಾನೆ. ಅಲ್ಲೇ ಇದ್ದವರು ಆ ವ್ಯಕ್ತಿಯ ಕೈಯಿಂದ ಚಾಕು ಕಸಿದುಕೊಂಡು, ಕೃಷ್ಣಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200