ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಬೆಂಗಳೂರು : ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ಶರಾವತಿ ಭೂಗತ (ಪಂಪ್ಡ್ ಸ್ಟೋರೇಜ್) ವಿದ್ಯುತ್ ಯೋಜನೆಯಿಂದ ಪಶ್ಚಿಮಘಟ್ಟದ ಅಂದಾಜು 350 ಎಕರೆ ಅರಣ್ಯ (forest) ನಾಶ ಆಗಲಿದೆ ಎಂದು ಬಿಜೆಪಿಯ ಡಿ.ಎಸ್.ಅರುಣ್ ಸರ್ಕಾರದ ಗಮನ ಸೆಳೆದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಡಿ.ಎಸ್.‌ಅರುಣ್‌, ಯೋಜನೆಯಿಂದ ಶರಾವತಿ ಅಭಯಾರಣ್ಯದಲ್ಲಿನ (forest) ಸಸ್ಯ ಸಂಪತ್ತು, ವಿವಿಧ ಪ್ರಭೇದಗಳು, ಅಳಿವಿನ ಅಂಚಿನ ಪ್ರಾಣಿಗಳಿಗೂ ಕುತ್ತು ಬರಲಿದೆ. ಅಲ್ಲದೇ ಈ ಯೋಜನೆಗೆ ವ್ಯಾಪಕ ವಿರೋಧವೂ ಇದೆ ಎಂದರು.

ಬ್ಯಾಟರಿ ಎನರ್ಜಿ ಸ್ಟೋರೇಜ್‌ ಯೋಜನೆ

DS-Arun-speaks-at-session

ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪಕ್ಕದ ತಮಿಳುನಾಡು ಸರ್ಕಾರವು ಬೇಡಿಕೆ ಸಮಯದಲ್ಲಿ ಬೇಕಾಗುವ ವಿದ್ಯುತ್ ಅನ್ನು ಸಂಗ್ರಹಿಸಿಟ್ಟು ಸರಬರಾಜು ಮಾಡಲು ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ (ಬಿಇಎಸ್‌ಎಸ್) ಯೋಜನೆ ರೂಪಿಸಿದೆ ಎಂಬ ಮಾಹಿತಿಯನ್ನು ಗಮನಕ್ಕೆ ತಂದರು.

ಸೌರಶಕ್ತಿ ಮತ್ತು ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆ ಮಾಡಿ 500 ಮೆಗಾವಾಟ್‌ನಿಂದ 1,000 ಮೆಗಾವಾಟ್‌ ಸಾಮರ್ಥ್ಯದ ಬ್ಯಾಟರಿಗಳನ್ನು ವಿವಿಧ ಸಂಗ್ರಹ ಘಟಕಗಳಲ್ಲಿ ಶೇಖರಿಸಿ, ಹೆಚ್ಚು ಬೇಡಿಕೆ ಸಮಯದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ವಿದ್ಯುತ್ ಖರೀದಿ ವೆಚ್ಚ ಉಳಿತಾಯವಾಗುತ್ತದೆ.

– ಡಿ.ಎಸ್‌.ಅರುಣ್‌, ವಿಧಾನ ಪರಿಷತ್‌ ಸದಸ್ಯ

ಪರಿಸರ ಹಾಗೂ ವನ್ಯಜೀವಿ ನೆಲೆ ನಾಶ ಮಾಡದೇ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ ಅಳವಡಿಸುವ ಈ ಯೋಜನೆಯನ್ನು ಕಾರ್ಯಗತಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಸಕರ ಪ್ರಶ್ನೆಗೆ ಸರ್ಕಾರದಿಂದ ಪೂರಕ ಉತ್ತರ ಒದಗಿಸಲಾಗುವುದು ಎಂದು ಸಭಾನಾಯಕ ಬೋಸರಾಜು ತಿಳಿಸಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಅಧಿಕಾರಿಗಳು ಕೆಲಸ ಮಾಡಿಕೊಡ್ತಿಲ್ವಾ? ಶಿವಮೊಗ್ಗದಲ್ಲಿ ಇವತ್ತು ಇಡೀ ದಿನ ಉಪ ಲೋಕಾಯುಕ್ತರಿಗೆ ದೂರು ಕೊಡಬಹುದು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment