ಲಕ್ಷ ಲಕ್ಷ ಮೌಲ್ಯದ ಮಾಂಗಲ್ಯ ಸರ ಖರೀದಿಸಿ ಮನೆಗೆ ಹೋಗಿ ನೋಡಿದಾಗ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ : ಬಂಗಾರದ ಸರ (Gold Chain) ಖರೀದಿಸಿ ಸಿಟಿ ಬಸ್‌ನಲ್ಲಿ ಮನೆಗೆ ಮರಳುವ ಹೊತ್ತಿಗೆ ಕಳ್ಳತನವಾಗಿದೆ. ಮಹಿಳೆಯ ಬ್ಯಾಗಿನಿಂದ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಖರೀದಿಸಿದ ಕೆಲವೇ ಹೊತ್ತಿಗೆ ಕಳವು

ನಾಗರತ್ನಮ್ಮ ಎಂಬುವವರು ಗೋಪಿ ಸರ್ಕಲ್‌ ಸಮೀಪ ಆಭರಣ ಜ್ಯೂವೆಲರ್ಸ್‌ ಅಂಗಡಿಯಿಂದ 1.93 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ ಖರೀದಿಸಿದ್ದರು. ಅದಕ್ಕೆ 7 ಗ್ರಾಂ ತೂಕದ ತಾಳಿ, ಲಕ್ಷ್ಮಿ ಕಾಸು, ಗುಂಡುಗಳನ್ನು ಜ್ಯೂವೆಲರಿ ಅಂಗಡಿಯಲ್ಲೇ ಜೋಡಿಸಿಕೊಂಡಿದ್ದರು. ಒಟ್ಟು 2.50 ಲಕ್ಷ ರೂ. ಮೌಲ್ಯದ ಮಾಂಗಲ್ಯವನ್ನು ಬಾಕ್ಸ್‌ನಲ್ಲಿ ಹಾಕಿಸಿಕೊಂಡು, ಬ್ಯಾಗಿನಿಲ್ಲಿ ಇರಿಸಿಕೊಂಡಿದ್ದರು.

ಸಿಟಿ ಬಸ್‌ ಹತ್ತಿ ಮನೆಗೆ

BH-Road-Aamir-Ahmed-Circle-1.jpg

ನಾಗರತ್ನಮ್ಮ ಅವರು ತಮ್ಮ ಸಹೋದರಿ ಮತ್ತು ಮಗಳೊಂದಿಗೆ ಆಭರಣ ಜ್ಯೂವೆಲರಿ ತೆರಳಿದ್ದರು. ಅಲ್ಲಿಂದ ಗಾಂಧಿ ಬಜಾರ್‌ಗೆ ಹೋಗಿದ್ದರು. ಬಳಿಕ ಮನೆಗೆ ತೆರಳಲು ಎಸ್‌.ಎನ್‌.ಸರ್ಕಲ್‌ನಲ್ಲಿ ಸಿಟಿ ಬಸ್‌ ಹತ್ತಿದ್ದರು. ಬಸ್ಸು ಬಸ್‌ ನಿಲ್ದಾಣದವರೆಗೆ ಹೋಗಿ ತಿರುಗಿ ಮಾರುಕಟ್ಟೆಗೆ ಬಂದಿತ್ತು. ಈ ವೇಳೆಯಲ್ಲೆ ಚಿನ್ನದ ಸರ (Gold Chain) ಕಳುವಾಗಿರುವ ಕುರಿತು ಮಹಿಳೆ ಶಂಕೆ ವ್ಯಕ್ತಪಡಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಮನೆಗೆ ಹೋದಾಗ ಕಾದಿತ್ತು ಶಾಕ್‌

ಮನೆಗೆ ಹೋಗಿ ಬ್ಯಾಗಿನಿಂದ ಆಭರಣ ಜ್ಯೂವೆಲರ್ಸ್‌ ಅಂಗಡಿಯ ಬಾಕ್ಸ್‌ ಹೊರತೆಗೆದು ನೋಡಿದಾಗ ಮಾಂಗಲ್ಯ ಸರ ಇರಲಿಲ್ಲ. ಆತಂಕಕ್ಕೀಡಾದ ಮಹಿಳೆ ಕುಟುಂಬದವರಿಗೆ ಮಾಹಿತಿ ನೀಡಿದ್ದರು. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ವಿಧಾನಸೌಧದಲ್ಲಿ ಕೆಲಸ ಕೊಡಿಸ್ತೀನಿ ಅಂದ, ಲಕ್ಷ ಲಕ್ಷ ಹಣ ಪಡೆದವನ ಹಿನ್ನೆಲೆ ಪರಿಶೀಲಿಸಿದಾಗ ಕಾದಿತ್ತು ಆಘಾತ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment