ಭದ್ರಾವತಿ : ಮೈಸೂರು ಪೇಪರ್ ಮಿಲ್ಸ್ (MPM) ಕಾರ್ಖಾನೆ ಪುನಾರಂಭ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಂಗಳೂರಿನ ವಿಕಾಸ ಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ MPM ಪುನಾರಂಭ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಶಾಸಕ ಸಂಗಮೇಶ್ವರ ತಿಳಿಸಿದ್ದಾರೆ.
ಸದನದಲ್ಲಿ ಚರ್ಚೆ ಬಳಿಕ ಮೀಟಿಂಗ್

ಎಂ.ಪಿ.ಎಂ ಕಾರ್ಖಾನೆ ಪುನಾರಂಭ ಕುರಿತು ಸದನಲ್ಲಿ ಚರ್ಚೆ ನಡೆಸಲಾಯಿತು. ಇದರ ಪರಿಣಾಮ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕಚೇರಿಯಲ್ಲಿ ಶಾಸಕ ಸಂಗಮೇಶ್ವರ, ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ವೇಳೆ ಎಂ.ಪಿ.ಎಂ ಕಾರ್ಖಾನೆಗೆ ಇರುವ ತೊಡಕುಗಳ ಕುರಿತು ಪರಾಮರ್ಶಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭದ್ರಾವತಿಯ ಯುವಕರಿಗೆ ಉದ್ಯೋಗ ಸೃಷ್ಟಿಸುವ ಕಾರ್ಯ ಸಾಕಾರಗೊಳ್ಳುವ ನಿಟ್ಟಿನಲ್ಲಿ ಹಾಗೂ ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಕಾರ್ಖಾನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಚಿವರ ಸಮ್ಮುಖದಲ್ಲಿ ಸಭೆಗೆ ಒಪ್ಪಿಸಿದ್ದೇನೆ.
– ಬಿ.ಕೆ.ಸಂಗಮೇಶ್ವರ, ಭದ್ರಾವತಿ ಶಾಸಕ
ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೇನೆಯ ನಿವೃತ್ತ ಮಹಿಳಾ ಅಧಿಕಾರಿ, ಕ್ಯಾನ್ಸರ್ ಗೆಲ್ಲುವ ಸೂತ್ರ ತಿಳಿಸಿದ ಕರ್ನಲ್, ಏನದು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





