| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಭದ್ರಾವತಿ : ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ ರೌಡಿ ಶೀಟರ್ (Rowdy Sheeter) ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪರ್ ಟೌನ್ ಇನ್ಸ್ಪೆಕ್ಟರ್ ನಾಗಮ್ಮ, ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಕೊಲೆ ಯತ್ನ ಪ್ರಕರಣದರಲ್ಲಿ ರೌಡಿ ಶೀಟರ್ (Rowdy Sheeter) ಕಡೇಕಲ್ ಅಬೀದ್ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇನ್ಸ್ಪೆಕ್ಟರ್ ನಾಗಮ್ಮ ನೇತೃತ್ವದ ತಂಡ ಬಂಧಿಸಲು ಯತ್ನಿಸಿತು. ಈ ಸಂದರ್ಭ ಕಡೇಕಲ್ ಅಬೀದ್ ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ದಾಳಿ ನಡೆಸಿದ್ದಾನೆ ಎಂದು ಜಿಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
![]()
ಪೊಲೀಸ್ ಸಿಬ್ಬಂದಿ ಅರುಣ್ ಮೇಲೆ ದಾಳಿ ನಡೆಸಿ ಕಡೇಕಲ್ ಅಬೀದ್ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ನಾಗಮ್ಮ, ಕಡೇಕಲ್ ಅಬೀದ್ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಬ್ಬಂದಿ ಅರುಣ್ ಕುಮಾರ್ ಮತ್ತು ಕಡೇಕಲ್ ಅಬೀದ್ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.
![]()
ಕಡೇಕಲ್ ಅಬೀದ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ರಾಬರಿ, ಕೊಲೆ ಯತ್ನ ಸೇರಿ ಒಟ್ಟು 20 ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಡಿವೈಎಸ್ಪಿ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()