ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಮತ್ತು ಎ.ಆರ್.ಎಸ್.ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಘಟನೆ ಕುರಿತು ಲೋಕಾಯುಕ್ತ ಪ್ರಕಟಣೆಯಲ್ಲಿ ವಿವರ ನೀಡಲಾಗಿದೆ.
ಲೋಕಾಯುಕ್ತ ಪ್ರಕಟಣೆಯಲ್ಲಿ ಏನಿದೆ?
ಡಿ.ಎ.ಆರ್. ಪೊಲೀಸ್ನ ಎಹೆಚ್ಸಿ ಪ್ರಸನ್ನ ಕುಮಾರ್ ಅವರನ್ನು ಭದ್ರಾವತಿಯ ತಾಲೂಕು ಕಚೇರಿಯ ಖಜಾನೆಯ ಗಾರ್ಡ್ ಕರ್ತವ್ಯದಲ್ಲೇ ಮುಂದುವರೆಸಲು ಡಿವೈಎಸ್ಪಿ ಕೃಷ್ಣಮೂರ್ತಿ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಎಆರ್ಎಸ್ಐ ರವಿಗೆ ಅವರಿಗೆ ತಲುಪಿಸುವಂತೆ ಸೂಚಿಸಿದ್ದರು. ಈ ಕುರಿತು ಫೋನ್ನಲ್ಲಿ ನಡೆಸಿದ ಸಂಭಾಷಣೆಯನ್ನು ಪ್ರಸನ್ನ ಕುಮಾರ್ ರೆಕಾರ್ಡ್ ಮಾಡಿಕೊಂಡಿದ್ದರು ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ತೆಂಗು, ಅಡಿಕೆ ಮರಗಳು ಧರೆಗೆ, ಎಲ್ಲೆಲ್ಲಿ ಹೇಗಿದೆ ವರ್ಷಧಾರೆ?
ಲೋಕಾಯುಕ್ತಕ್ಕೆ ದೂರು ನೀಡಿದ್ದ ಪೊಲೀಸ್
ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪ್ರಸನ್ನ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು ಮಧ್ಯಾಹ್ನ ಡಿ.ಎ.ಆರ್ ಪೊಲೀಸ್ ವಸತಿ ಗೃಹದಲ್ಲಿರುವ ಡಿವೈಎಸ್ಪಿ ಮನೆಯಲ್ಲಿ ಪ್ರಸನ್ನ ಕುಮಾರ್ ಹಣವನ್ನು ಡಿವೈಎಸ್ಪಿ ಕೃಷ್ಣಮೂರ್ತಿಗೆ ಅವರಿಗೆ ಕೊಟ್ಟಿದ್ದಾರೆ. ಆಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

5 ಸಾವಿರ ರೂ. ಹಣದ ಸಹಿತ ಡಿವೈಎಸ್ಪಿ ಕೃಷ್ಣಮೂರ್ತಿ, ಎಆರ್ಎಸ್ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಠಾಣೆ ಇನ್ಸ್ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ.
ಲೋಕಾಯುಕ್ತ (Lokayukta) ಎಸ್.ಪಿ ಮಂಜುನಾಥ ಚೌದರಿ, ಡಿವೈಎಸ್ಪಿ ಚಂದ್ರಶೇಖರ್.ಬಿ.ಪಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ, ಸಿಬ್ಬಂದಿ ಯೋಗೇಶ್, ಮಂಜುನಾಥ್, ಟೀಕಪ್ಪ, ಸುರೇಂದ್ರ, ಪ್ರಶಾಂತ್ ಕುಮಾರ್, ಚನ್ನೇಶ, ದೇವರಾಜ್, ಅರುಣ್ ಕುಮಾರ್, ಪ್ರಕಾಶ್ ಬಾರಿಮರದ, ಅಂಜಲಿ, ಚಂದ್ರಿಬಾಯಿ, ಗೋಪಿ, ಜಯಂತ್, ತರುಣ್ ಕುಮಾರ್, ಗಂಗಾಧರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















