ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ : ಸಿಟಿಯ ಚನ್ನಕೇಶವ ನಗರದಲ್ಲಿ ಸರಣಿ ಮನೆಗಳ್ಳತನವಾಗಿದೆ (theft). ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ನಗದು ಕಳವುವಾಗಿದೆ ಎಂದು ಆರೋಸಪಿಸಲಾಗಿದೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ.
ಚನ್ನಕೇಶವ ನಗರದ 15ನೇ ಅಡ್ಡರಸ್ತೆ ನಿವಾಸಿ ನಂದ ಬಣಕಾರ್ ಅವರು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದರು. ಕಳ್ಳರು ಅವರ ಮನೆ ಬಾಗಿಲು ಮುರಿದು ಮಾಂಗಲ್ಯ ಸರ ಸೇರಿದಂತೆ ಅಂದಾಜು 14 ಲಕ್ಷ ರೂ. ಮೌಲ್ಯದ ಒಡವೆ ಹಾಗೂ 50 ಸಾವಿರ ರೂ. ನಗದು ಕಳವು ಮಾಡಿದ್ದಾರೆ.
ಇದೇ ಕೇರಿಯಲ್ಲಿರುವ ಮೆಸ್ಕಾಂ ಲೈನ್ಮನ್ ಹಾಲೇಶಪ್ಪ ಅವರ ಮನೆ ಬಾಗಿಲು ಮುರಿದು ಕಳ್ಳತನ (theft) ಮಾಡಲಾಗಿದೆ. ಈ ವೇಳೆ ಪಕ್ಕದ ಮನೆಯವರು ಹೊರಗೆ ಬಂದಾಗ ಕಳ್ಳರು ಕಾಣಿಸಿಕೊಂಡಿದ್ದಾರೆ. ಅವರನ್ನು ಹಿಡಿಯುವ ಪ್ರಯತ್ನ ಮಾಡಿದಾಗ, ಬೆಳ್ಳಿ ವಸ್ತುಗಳಿದ್ದ ಚೀಲ ಸಿಕ್ಕಿದೆ.
ಚನ್ನಕೇಶವ ನಗರದ ತಿಪ್ಪೇಶಪ್ಪ ಹಾಗೂ ಇದೇ ಕೇರಿಯಲ್ಲಿರುವ ವೆಂಕಟೇಶ್ ಅವರ ಮನೆಯಲ್ಲೂ ಕಳ್ಳತನವಾಗಿದೆ. ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಡಿಸಿ ಕಚೇರಿ ಮುಂದಿನ ಖಾಲಿ ಜಾಗಕ್ಕೆ ಬೇಲಿ, ಹಿಂದು ಕಾರ್ಯಕರ್ತರು ಗರಂ, ಬಿಗುವಿನ ವಾತಾವರಣ
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






