ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಮನೆಗಳ್ಳತನಕ್ಕೆ (Thief) ಬಂದಾತ ಜನರನ್ನು ಕಂಡು ಪರಾರಿಯಾಗುವಾಗ ಜಲಜೀವನ್ ಮಿಷನ್ ಯೋಜನೆಯ ಪೈಪ್ ಅಳವಡಿಸಲು ತೋಡಿದ್ದ ಗುಂಡಿ ಬಿದ್ದು ಗಾಯಗೊಂಡಿದ್ದಾನೆ. ಊರಿನವರೆ ಆತನನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ
ತೀರ್ಥಹಳ್ಳಿ ತಾಲೂಕು ದೇಮ್ಲಾಪುರ ಗ್ರಾಮದ ಚಂದ್ರಶೇಖರ್ ಎಂಬುವವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದಾಗ ಘಟನೆ ಸಂಭವಿಸಿದೆ.

ಏನಿದು ಪ್ರಕರಣ?
ಚಂದ್ರಶೇಖರ್ ಅವರು ತೋಟದಲ್ಲಿ ಔಷಧಿ ಹೊಡೆಯಲು ಹೋಗಿದ್ದರು. ಅವರ ಪತ್ನಿ ಮತ್ತು ಮಗ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಮಧ್ಯಾಹ್ನ ಚಂದ್ರಶೇಖರ್ ಅವರು ಮನೆಗೆ ಮರಳಿದ್ದು, ಆಗ ವ್ಯಕ್ತಿಯೊಬ್ಬ (Thief) ಮನೆಯ ಬಾಗಿಲಿನ ಬೀಗ ಒಡೆಯುತ್ತಿರುವುದನ್ನು ಗಮನಿಸಿದ್ದಾರೆ. ಚಂದ್ರಶೇಖರ್ ಜೋರಾಗಿ ಕೂಗಿಕೊಂಡಿದ್ದು, ನೆರೆ ಹೊರೆಯ ಮನೆಯ ಜನರೆಲ್ಲ ಅತ್ತ ಧಾವಿಸಿದ್ದಾರೆ.

ಆತಂಕಗೊಂಡ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಸಂದರ್ಭ ಪೈಪ್ಲೈನ್ ಅಳವಡಿಸಲು ತೋಡಿದ್ದ ಗುಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ಗ್ರಾಮಸ್ಥರೆ ಆತನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳತನಕ್ಕೆ ಬಂದವನ ಹೆಸರನ್ನು ಹನೀಫ್ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

- ಶಿವಮೊಗ್ಗದಲ್ಲಿ ಲವ್ ಲೆಟರ್ಸ್ ನಾಟಕ, ಈಗಲೇ ಕಾಯ್ದಿರಿಸಿ ಟಿಕೆಟ್, ಇಲ್ಲಿದೆ ಲಿಂಕ್

About The Editor
ನಿತಿನ್ ಆರ್.ಕೈದೊಟ್ಲು





