ಶಿವಮೊಗ್ಗ : ಒಂದು ಲಕ್ಷ ರೂ. ಲಂಚ (Bribe) ಪಡೆಯುತ್ತಿದ್ದ ಸಂದರ್ಭ ಸ್ಮಾರ್ಟ್ ಸಿಟಿ ಯೋಜನೆಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 11 ಲಕ್ಷ ರೂ. ಮೊತ್ತದ ಬಿಲ್ ಪಾವತಿಗೆ ಕೃಷ್ಣಪ್ಪ ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಹಣ ಪಡೆಯುವ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಕ್ಸ್ಟ್ರೀಮ್ ಮೀಡಿಯಾ ಸಂಸ್ಥೆಯ ಎಕ್ಸಿಕ್ಯೂಟಿವ್ ಸೈಟ್ ಇಂಜಿನಿಯರ್ ಪವನ್ ಅವರಿಂದ ಸ್ಮಾರ್ಟ್ ಸಿಟಿಯ ಪ್ರಭಾರ ಚೀಪ್ ಇಂಜಿನಿಯರ್ ಕೃಷ್ಣಪ್ಪ ಒಂದು ಲಕ್ಷ ರೂ. ಲಂಚ (Bribe) ಸ್ವೀಕರಿಸುತ್ತಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
11 ಲಕ್ಷದ ಬಿಲ್ ಬಾಕಿ ಇತ್ತು

ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ 7 ಡಿಜಿಟಲ್ ಡಿಸ್ಪ್ಲೆ ಬೋರ್ಡುಗಳನ್ನು ಅಳವಡಿಸಲಾಗಿದೆ. ಎಕ್ಸ್ಟ್ರೀಮ್ ಮೀಡಿಯಾ ಸಂಸ್ಥೆಯೆ ಇದರ ನಿರ್ವಹಣೆ ಮಾಡುತ್ತಿದೆ. ಕಳೆದ ಎರಡು ತ್ರೈಮಾಸಿಕದ 11.16 ಲಕ್ಷ ರೂ. ಮೊತ್ತದ ಬಿಲ್ ಬಾಕಿ ಇತ್ತು. ಇದನ್ನು ಮಂಜೂರು ಮಾಡಲು ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಒಂದು ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಸೈಟ್ ಇಂಜಿನಿಯರ್ ಪವನ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಇವತ್ತು ನೆಹರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಯೋಜನೆ ಕಚೇರಿ ಮುಂಭಾಗದ ಆವರಣದಲ್ಲಿ ಒಂದು ಲಕ್ಷ ರೂ. ಪಡೆಯುವಾಗ (Bribe) ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಅರೆಸ್ಟ್
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ ಚೌಧರಿ ಮಾರ್ಗದರ್ಶನದಲ್ಲಿ, ಉಪಾಧೀಕ್ಷಕ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ, ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಮಂಜುನಾಥ್, ಸುರೇಂದ್ರ, ಪ್ರಶಾಂತ್ ಕುಮಾರ್, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್, ಪ್ರಕಾಶ್ ಬಾರಿಮರದ, ಆದರ್ಶ, ಚಂದ್ರಿಬಾಯಿ, ಪ್ರದೀಪ್, ಗೋಪಿ, ಜಯಂತ್, ತರುಣ್ ಕುಮಾರ್, ಗಂಗಾಧರ್, ಆನಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





