ಶಿಕಾರಿಪುರ : ಖಾಸಗಿ ಬಸ್ ಮತ್ತು ಟಾಟಾ ಏಸ್ ವಾಹನ ಡಿಕ್ಕಿಯಾಗಿ (Crash) ಐವರು ಗಾಯಗೊಂಡಿದ್ದಾರೆ. 10ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ನರಸಾಪುರ ಸಮೀಪ ಇಂದು ಸಂಜೆ ಘಟನೆ ಸಂಭವಿಸಿದೆ.
ಶಿರಾಳಕೊಪ್ಪದ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್ಸು, ಚಿಕ್ಕೇರೂರು ಕಡೆಯಿಂದ ಬರುತ್ತಿದ್ದ ಕುರಿಗಾಹಿಗಳ ಟಾಟಾ ಏಸ್ ವಾಹನ ಡಿಕ್ಕಿಯಾಗಿವೆ (Crash). ಬಸ್ಸಿನಲ್ಲಿದ್ದ ಪ್ರಯಾಣಿಕರು ಮತ್ತು ಟಾಟಾ ಏಸ್ನಲ್ಲಿದ್ದ ಕುರಿಗಾಹಿಗಳು ಗಾಯಗೊಂಡಿದ್ದಾರೆ.
ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ. ಟಾಟಾ ಏಸ್ ಸಂಪೂರ್ಣ ಹಾನಿಗೀಡಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್


ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
