ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 14 ಆಗಸ್ಟ್ 2019
ಕಳೆದ ವಾರ ಸುರಿದ ಭಾರಿ ಮಳೆ ಮತ್ತು ನೀರಿನ ರಭಸಕ್ಕೆ, ಶಿವಮೊಗ್ಗ ನಗರ ಸಮೀಪದ ಪುರದಾಳು ಗ್ರಾಮದಲ್ಲಿ ಭೂಮಿ ಕೊಚ್ಚಿ ಹೋಗಿದೆ. ಚೆಕ್ ಡ್ಯಾಂನ ಕೋಡಿ ಕೊಚ್ಚಿ ಹೋಗುವ ಆತಂಕ ಎದುರಾಗಿದೆ.
ನೀರು ರಭಸವಾಗಿ ಹರಿಯಲು ಆರಂಭವಾದಂತೆ ಡ್ಯಾಂ ಸಮೀಪದ ಕೋಡಿ ಕೊಚ್ಚಿ ಹೋಗುವ ಆತಂಕ ಎದುರಾಗಿತ್ತು. ಹಾಗಾಗಿ ಗ್ರಾಮಸ್ಥರು ಕೂಡಲೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರು. ಆದರೆ ಯಾರೊಬ್ಬರು ಇತ್ತ ಸುಳಿಯಲಿಲ್ಲ. ಈವರೆಗು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಅಂತಾ ಗ್ರಾಮಸ್ಥರು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿನ್ನೆ ಜಿಲ್ಲೆಯ ವಿವಿಧೆಡೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಹಾನಿಯಾದ ಪ್ರದೇಶದ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಆದರೆ ಶಿವಮೊಗ್ಗ ನಗರ ಸಮೀಪದ ಪುರದಾಳು ಗ್ರಾಮಕ್ಕೆ ಅಧಿಕಾರಿಗಳು ಇನ್ನು ಭೇಟಿ ನೀಡಿ ಪರಿಶೀಲನೆ ನಡೆಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನು, ಪುರದಾಳು ಗ್ರಾಮದಲ್ಲಿನ ಪರಿಸ್ಥಿತಿ ಕುರಿತು ಹಿರಿಯ ಪತ್ರಕರ್ತ ಶಶಿ ಸಂಪಳ್ಳಿ ಅವರು ನೀಡಿ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.
https://www.facebook.com/shashsampalli/videos/2233515483425057/?t=16
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






