ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು (Sheeps) ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ.
ಸಿಡಿಲಿಗೆ ಕುರಿಗಳು ಸಾವು
ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದಲ್ಲಿ ಸಿಡಿಲಿಗೆ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಇಲ್ಲಿನ ಹುಚ್ಚಪ್ಪ ಎಂಬುವವರಿಗೆ ಸೇರಿದ ಕುರಿಗಳನ್ನು ಗುಡ್ಡದ ಬಯಲಿನಲ್ಲಿ ಮೇಯಿಸುತ್ತಿದ್ದರು. ಈ ಸಂದರ್ಭ ಗುಡುಗು ಸಹಿತ ಮಳೆ ಶುರುವಾಗಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್, ಏನಿದು ಕೇಸ್?
ಈ ವೇಳೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಇದರಿಂದ ರೈತ ಹುಚ್ಚಪ್ಪ ಅವರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಇನ್ನು, ಗಾಳಿ, ಮಳೆಯಿಂದಾಗ ಈ ಭಾಗದಲ್ಲಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





