ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕಳೆದ ಒಂದು ವಾರದಿಂದ ಸಮರ್ಪಕವಾಗಿ ಕುಡಿಯುವ ನೀರು (Water) ಪೂರೈಕೆ ಮಾಡದ ಅಧಿಕಾರಿಗಳ ವಿರುದ್ಧ ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಲಿ ಬಿಂದಿಗೆ, ಬಕೇಟ್ ಹಿಡಿದು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ » ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಪಾಲಿಕೆ ನೌಕರರು, ತಪ್ಪಿದರೆ ಅನಿರ್ದಿಷ್ಟಾವಧಿ ಮುಷ್ಕರದ ವಾರ್ನಿಂಗ್
ಸೋಮಿನಕೊಪ್ಪ ಸಮೀಪದ ಸಹ್ಯಾದ್ರಿ ನಗರದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ನಾಗರಿಕರು ಪ್ರತಿಭಟನೆ ನಡೆಸಿದರು.

ಹಳೆ ಪದ್ಧತಿಯ ಬದಲು 24×7 ಯೋಜನೆ ಅಡಿ ನೀರು (Water) ಪೂರೈಕೆ ವ್ಯವಸ್ಥೆ ಮಾಡಿದ್ದಾರೆ. ಈ ಬದಲಾವಣೆ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿಲ್ಲ. ಈಗ ಹಳೆ ಪದ್ಧತಿಯಲ್ಲು ನೀರು ಬಿಡುತ್ತಿಲ್ಲ. ಹೊಸ ಪದ್ಧತಿಯಲ್ಲು ನೀರು ಪೂರೈಕೆ ಆಗುತ್ತಿಲ್ಲ. ಹಾಗಾಗಿ ಕಳೆದ ಒಂದು ವಾರದಿಂದ ಇಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಕರೆ ಮಾಡಿದರು ಸಂಪರ್ಕಕ್ಕೆ ಸಿಗುತ್ತಿಲ್ಲ. ಸೂಕ್ತ ಪ್ರತಿಕ್ರಿಯೆ ಲಭಿಸುತ್ತಿಲ್ಲ.
– ಸ್ಥಳೀಯರ ಆರೋಪ
ಸೂಕ್ತ ಮಾಹಿತಿ ನೀಡದೆ ಕುಡಿಯುವ ನೀರು ಪೂರೈಕೆ ಸ್ಥಗಿತಗೊಳಿಸಿದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ನೀರು ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
ಕುಲುಷಿತ, ದುರ್ವಾಸನೆಯ ನೀರು ಪೂರೈಕೆ

ಇನ್ನೊಂದೆಡೆ ವಿನೋಬನಗರ ಸಮೀಪದ ಕೆಂಚಪ್ಪ ಬಡಾವಣೆಗೆ ಇಂದು ಕಲುಷಿತ ನೀರು ಪೂರೈಕೆಯಾಗಿದೆ ಎಂದು ಸ್ಥಳೀಯರು ಆಪಾದಿಸಿದ್ದಾರೆ. ನೀರು ದುರ್ವಾಸನೆ ಬರುತ್ತಿದ್ದು ಬಳಕೆಗೆ ಯೋಗ್ಯವಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






