ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ : ಕಾರು ಅಡ್ಡಗಟ್ಟಿ 3.50 ಲಕ್ಷ ರೂ. ಮೌಲ್ಯದ ತಾಮ್ರ ಮತ್ತು ಹಿತ್ತಾಳೆಯ ಗುಜರಿ (Scrap) ವಸ್ತುಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಗುಜರಿ ವಸ್ತುಗಳು ಸೇರಿ ಒಟ್ಟು 7.35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ » ಕೆಎಫ್ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು
ಭದ್ರಾವತಿ ಹೊಸಮನೆಯ ಭೋವಿ ಕಾಲೋನಿಯ ಕವಿರಾಜ್ (21), ಶಿವಮೊಗ್ಗದ ಮೇಲಿನ ತುಂಗಾನಗರದ ಮುಬಾರಕ್ (24), ಭದ್ರಾವತಿ ಬಾರಂದೂರಿನ ಅಜಿತ್ ಅಲಿಯಾಸ್ ಘಟ್ಟ (19), ಕಬಳಿಕಟ್ಟೆಯ ಮಂಜುನಾಥ್ ಅಲಿಯಾಸ್ ಮಂಜು (21) ಬಂಧಿತರು.
ಕಾರು ಅಡ್ಡಗಟ್ಟಿ, ಗುಜರಿ ವಸ್ತು ದರೋಡೆ
ಶಿವಮೊಗ್ಗದ ಆರ್.ಎಂ.ಎಲ್ ನಗರದ ಕಾರ್ತಿಕ್ ಓಮ್ನಿ ಕಾರಿನಲ್ಲಿ 3.50 ಲಕ್ಷ ರೂ. ಮೌಲ್ಯದ ಹಿತ್ತಾಳೆ ಮತ್ತು ತಾಮ್ರದ ಗುಜರಿ (Scrap) ವಸ್ತುಗಳನ್ನು ಕೊಂಡೊಯ್ಯುತ್ತಿದ್ದರು. ಮಾ.25ರಂದು ಬೆಳಗ್ಗೆ 6.30ರ ಹೊತ್ತಿಗೆ ಭದ್ರಾವತಿಯ ರಾಮಿನಕೊಪ್ಪದಲ್ಲಿ ಓಮ್ನಿ ಕಾರನ್ನು ಅಡ್ಡಗಟ್ಟಿದ ನಾಲ್ವರು, ಗುಜರಿ ವಸ್ತುಗಳನ್ನು ದರೋಡೆ ಮಾಡಿದ್ದರು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 700 ಕೆ.ಜಿ ತೂಕದ ಹಿತ್ತಾಳೆ ಮತ್ತು ತಾಮ್ರದ ಗುಜರಿ ವಸ್ತುಗಳು, ಕೃತ್ಯಕ್ಕೆ ಬಳಸಿದ ಟಾಟಾ ಏಸ್ ವಾಹನ, ಒಂದು ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭದ್ರಾವತಿ ಡಿವೈಎಸ್ಪಿ ನಾಗರಾಜ್ ಮೇಲ್ವಿಚಾರಣೆಯಲ್ಲಿ, ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಜಗದೀಶ ಹಂಚಿನಾಳ್, ಪಿಎಸ್ಐ ಶ್ರೀಶೈಲಕೆಂಚಣ್ಣವರ ನೇತೃತ್ವದಲ್ಲಿ, ಸಿಬ್ಬಂದಿ ಚಂದ್ರಶೇಖರ್, ದಿವಾಕರ್ ರಾವ್, ಮಂಜುನಾಥ, ಈರಯ್ಯ, ರೇವಣ ಸಿದ್ದಪ್ಪ, ವಿಜಯ್ ಕುಮಾರ್ ಹಾಗೂ ಸಂತೋಷ ಕುಮಾರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















