ಸೊರಬ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಸಚಿವ ಮಧು ಬಂಗಾರಪ್ಪ ನೆರವಾಗಿದ್ದಾರೆ. ಗಾಯಾಳುಗಳನ್ನು (Injured) ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನು, ಅಪಘಾತಪಡಿಸಿ ಸ್ಥಳದಿಂದ ಪರಾರಿಯಾಗಿರುವ ಕಾರನ್ನು ಪತ್ತೆ ಹಚ್ಚುವಂತೆ ಸಚಿವ ಮಧು ಬಂಗಾರಪ್ಪ ಪೊಲೀಸರಿಗೆ ಸೂಚನೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು?
ಸೊರಬ ತಾಲೂಕು ಕುಪ್ಪಗಡ್ಡೆ ಬೈಕ್ಗೆ ಡಿಕ್ಕಿ ಹೊಡೆದ ಕಾರು ಪರಾರಿಯಾಗಿದೆ. ಬೈಕಿನಲ್ಲಿದ್ದವರಿಗೆ ತೀವ್ರ ಗಾಯವಾಗಿತ್ತು. ಕೂಡಲೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅದೇ ಮಾರ್ಗದಲ್ಲಿ ಹೊಸನಗರಕ್ಕೆ ತೆರಳುತ್ತಿದ್ದ ಸಚಿವ ಮಧು ಬಂಗಾರಪ್ಪ ಕೂಡಲೆ ನೆರವಾದರು. ಗಾಯಾಳುಗಳನ್ನು (Injured) ತಮ್ಮದೆ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದರು.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡುವಂತೆ ವೈದ್ಯರಿಗೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇನ್ನು, ಡಿಕ್ಕಿ ಹೊಡೆಸಿ ಸ್ಥಳದಿಂದ ಪರಾರಿಯಾದ ಕಾರನ್ನು ಪತ್ತೆ ಹೆಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದರು.





