ಪದವಿ ಪರೀಕ್ಷೆ ಪಾಸಾದರು ನಾಲ್ಕು ವರ್ಷದಿಂದ ಅಂಕಪಟ್ಟಿ ನೀಡದ ಕುವೆಂಪು ವಿವಿ, ಸತ್ಯಾಗ್ರಹದ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕುವೆಂಪು ವಿವಿಯಲ್ಲಿ ಬಿ.ಇಡಿ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ (students) ಕಳೆದ 4 ವರ್ಷಗಳಿಂದ ಅಂಕಪಟ್ಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಇಡಿ ಪದವೀಧರರು ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌?

ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸುಮಾರು 19ಕ್ಕೂ ಹೆಚ್ಚು ಬಿಇಡಿ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ 2021ರಿಂದ 2024ರವರೆಗೆ ಸುಮಾರು 2,500 ವಿದ್ಯಾರ್ಥಿಗಳು (students) ಪದವಿ ಪಡೆದಿದ್ದಾರೆ. ಆದರೆ, ಈವರಿಗೆ ಎರಡು ವರ್ಷದ ಯಾವುದೇ ಸೆಮಿಸ್ಟರ್‌ಗಳ ಮುದ್ರಿತ ಅಂಕಪಟ್ಟಿಯನ್ನು ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

B.Ed-students-protest-against-Kuvempu-University

ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು 15 ದಿನಗಳೊಳಗೆ ಮುದ್ರಿತ ಅಂಕಪಟ್ಟಿ ನೀಡಬೇಕು. ಇಲ್ಲದಿದ್ದರೆ ಕುವೆಂಪು ವಿವಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ

ಬಂಜಾರ ಯುವಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್, ಪ್ರಮುಖರಾದ ಉಮಾಮಹೇಶ್ವರ ನಾಯ್ಕ, ವೆಂಕಟೇಶ್, ಸ್ಪಂದನಾ, ರಮೇಶ್, ನರಸಿಂಹ, ಅಲೋಕ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

Leave a Comment