ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿ ವೇಳೆ ಸಾವನ್ನಪ್ಪಿದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಅಂತ್ಯಕ್ರಿಯೆ (Final Rites) ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಪುತ್ರ ಅಭಿಜಯ್ ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.
ಧಾರ್ಮಿಕ ವಿಧಿವಿಧಾನ, ಸರ್ಕಾರಿ ಗೌರವ
ಅಂತ್ಯಕ್ರಿಯೆಗು ಮುನ್ನ ರೋಟರಿ ಚಿತಾಗಾರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಯತು. ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ನಮನ ಸಲ್ಲಿಸಿದರು. ರಾಜ್ಯ ಸರ್ಕಾರದ ವತಿಯಿಂದ ಸಚಿವ ಮಧು ಬಂಗಾರಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್ ಅಂತಿಮ ಯಾತ್ರೆ, ಹೇಗಿತ್ತು? ಯಾರೆಲ್ಲ ಇದ್ದರು?
ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಗುಂಡಾ ಭಟ್ಟರ ನೇತೃತ್ವದಲ್ಲಿ ನಾರಾಯಣ ಬಲಿ ಹೋಮ ನಡೆಸಲಾಯಿತು. ಆ ನಂತರ ಪುತ್ರ ಅಭಿಜಯ್, ಮಂಜುನಾಥ ರಾವ್ ಅವರ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಶ (Final Rites) ಮಾಡಿದರು.



LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















