ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಹೊಸನಗರ ತಾಲ್ಲೂಕು ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಸತೀಶ್ ಶೆಟ್ಟಿ ಎಂಬವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್ ಮತ್ತು ಕೃಷ್ಣ ಎಂಬವರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Term) ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗಿವ ಜಾವ ಬಸ್ ಹತ್ತಿದ ಮಹಿಳೆ, ಸ್ವಲ್ಪ ದೂರ ಹೋದ್ಮೇಲೆ ಕಾದಿತ್ತು ಆಘಾತ
ಸತೀಶ್ ಶೆಟ್ಟಿ ಅವರು ಫಯಾಜ್ ಹಾಗೂ ಕೃಷ್ಣ ಅವರೊಂದಿಗೆ ಗಾರೆ ಕೆಲಸ ಮಾಡುತ್ತಿದ್ದರು. ಕೂಲಿ ಹಣ ಪಾವತಿಸುವ ವಿಚಾರದಲ್ಲಿ ಮೂವರ ನಡುವೆ ಮನಸ್ತಾಪ ಉಂಟಾಗಿತ್ತು. 2021ರ ಡಿ.22ರಂದು ಅಪರಾಧಿಗಳು ಸತೀಶ್ ಶೆಟ್ಟಿ ಅವರನ್ನು ಅಮೃತ ಗ್ರಾಮದ ಕೆಳಗಿನ ಕೆರೆಯ ದಂಡೆಗೆ ಕರೆದುಕೊಂಡು ಹೋಗಿ ಕತ್ತಿ ಮತ್ತು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದರು.
ಅನುಮಾನ ಬರಬಾರದು ಎಂದು ಶವವನ್ನು ಕೆರೆಗೆ ಎಸೆದು ಸಾಕ್ಷ್ಯ ನಾಶ ಮಾಡಲು ಮುಂದಾಗಿದ್ದರು. ಕೆಲ ದಿನಗಳ ಬಳಿಕ ಶವ ನೀರಿನಲ್ಲಿ ತೇಲಿತ್ತು. ಸತೀಶ್ ಶೆಟ್ಟಿಯವರ ಭಾವ ರಾಜುಶೆಟ್ಟಿ, ಇದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ರಿಪ್ಪನ್ ಪೇಟೆ ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ನಡೆಸಿದ ಪೊಲೀಸರು ಫಯಾಜ್ ಹಾಗೂ ಕೃಷ್ಣ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಭಾವತಿ ಜಿ., ಆರೋಪ ಸಾಬೀತಾದ ಕಾರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಅಣ್ಣಪ್ಪ ನಾಯ್ಕ ವಾದ ಮಂಡಿಸಿದ್ದರು.

LATEST NEWS
- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





