ಸುಹಾಸ್‌ ಶೆಟ್ಟಿ ಹತ್ಯೆ, ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ, ಎಲ್ಲೆಲ್ಲಿ ಪ್ರತಿಭಟನೆಯಾಯ್ತು? ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ (Protest) ನಡೆಯಿತು. ಬಿಜೆಪಿ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಹತ್ಯೆಯನ್ನು ಖಂಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಪ್ರತಿಭಟನೆ ನಡೆಯಿತು?

ಶಿವಮೊಗ್ಗ: ಬಿಜೆಪಿ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಸುಹಾಸ್‌ ಶೆಟ್ಟಿಯ ಹತ್ಯೆಗೈದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

bjp protest

ಶಿವಮೊಗ್ಗ: ಶುಕ್ರವಾರ ರಾತ್ರಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಮೌನಾಚರಣೆ ಮಾಡಿ ಪ್ರತಿಭಟನೆ ನಡೆಸಲಾಯಿತು. ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿ.ಹೆಚ್‌.ಪಿ ಜಿಲ್ಲಾಧ್ಯಕ್ಷ ವಾಸುದೇವ್‌ ಸೇರಿ ಹಲವರು ಭಾಗಿಯಾಗಿದ್ದರು.

VHP-Protest-in-Shimoga

ತೀರ್ಥಹಳ್ಳಿ: ಪಟ್ಟಣದಲ್ಲಿ ಶುಕ್ರವಾರ ಸಂಜೆ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ ಕಾಂಗ್ರಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

thirthahalli protest

ಸುಹಾಸ್‌ ಶೆಟ್ಟಿ ರೌಡಿಶೀಟರ್‌ ಎಂದು ಅಲ್ಲಿನ ಎಸ್‌.ಪಿ ಹೇಳುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾರನ್ನು ಬೇಕಿದ್ದರು ರೌಡಿಶೀಟರ್‌ ಎಂದು ಘೋಷಿಸುತ್ತದೆ. 2017ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 28 ಸಾವಿರ ಹಿಂದೂ ಕಾರ್ಯಕರ್ತರ ವಿರುದ್ಧ ರೌಡಿ ಶೀಟ್‌ ತೆರೆಲಾಗಿದೆ.

– ಆರಗ ಜ್ಞಾನೇಂದ್ರ, ಶಾಸಕ

ಸಾಗರ: ಶಿವಪ್ಪನಾಯಕ ವೃತ್ತದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ, ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ವತಿಯಿಂದ ಪ್ರತಿಭಟಿಸಲಾಯಿತು.

sagara protest

ಹತ್ಯೆ ಮಾಡಿದವರಿಗೆ ಠಾಣೆಯಲ್ಲಿ ರಾಜಾಥಿತ್ಯ ನೀಡುವುದು ಬೇಡ. ಅವರಿಗೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು. ಹಿಂದೂಗಳ ಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಪೊಲೀಸರು ಕೈಗೆ ಬಂದೂಕು ಕೊಟ್ಟಿರುವು ಅಲಂಕಾರಕ್ಕಲ್ಲ.

– ಹರತಾಳು ಹಾಲಪ್ಪ, ಮಾಜಿ ಸಚಿವ

ಹೊಳೆಹೊನ್ನೂರು: ಇಲ್ಲಿನ ಅರಹತೊಳಲು ಸರ್ಕಲ್‌ನಲ್ಲಿ ಬಿಜೆಪಿ ಹೊಳೆಹೊನ್ನೂರು ಮಂಡಲದ ವತಿಯಿಂದ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

Holehonnuru protest

ರಾಜ್ಯದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.

– ಎಂ.ಮಲ್ಲೇಶಪ್ಪ, ಬಿಜೆಪಿ ಮಂಡಲ ಅಧ್ಯಕ್ಷ

Arya-PU-College-Shimoga.

ಇದನ್ನೂ ಓದಿ » ಶಿವಮೊಗ್ಗ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment