ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕಳೆದ ರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಆಪರೇಷನ್ ಸಿಂಧೂರ (Operation Sindoor) ಹೆಸರಿನಲ್ಲಿ ನಡೆದ ದಾಳಿಗೆ ಶಿವಮೊಗ್ಗದಲ್ಲಿಯು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ದಾಳಿಯಲ್ಲಿ ಮೃತರಾದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥರಾವ್ ಅವರ ತಾಯಿ ಸುಮತಿ, ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.
ಸುಮತಿ ಏನೆಲ್ಲ ಹೇಳಿದರು?


ಕುಟುಂಬದಲ್ಲಿ ಯಜಮಾನ ಯಾವುದೇ ತೀರ್ಮಾನ ಕೈಗೊಂಡರು ನಾವೆಲ್ಲ ಬದ್ಧರಾಗಿರುತ್ತೇವೆ. ಹಾಗೆಯೆ ನಮ್ಮ ದೇಶವನ್ನು ಕುಟುಂಬ ಎಂದು ಪರಿಗಣಿಸಿದರೆ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದಾರೆ. ಅವರು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ.
ಹೊರ ದೇಶಕ್ಕೆಲ್ಲ ಆರಾಮವಾಗಿ ಹೋಗಿ ಬರುತ್ತಾರೆ. ಆದರೆ ನಮ್ಮದೇ ದೇಶದಲ್ಲಿ ನಾವು ಓಡಾಡಲು ಸಾಧ್ಯವಾಗುತ್ತಿಲ್ಲವಲ್ಲ ಎಂದು ಅನಿಸುತ್ತಿತ್ತು.
ನನ್ನ ಮಗ ಪ್ರಕೃತಿ ಸೌಂದರ್ಯ ನೋಡಿ ಬರಲು ಹೋದ. ಮಲೆನಾಡಿನಲ್ಲಿ ಹುಟ್ಟಿದವನು ಅಲ್ಲಿ ಹೋಗಿ ಅನಾಥವಾಗಿ ಸಾವನ್ನಪ್ಪಿದ್ದ. ಇದು ನನಗೆ ಬಹಳ ನೋವಿದೆ. ಮೋದಿ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ.
ಕಳೆದ ರಾತ್ರಿ ಎರಡ್ಮೂರು ಜನ ಎನ್ಐಎ ಅಧಿಕಾರಿಗಳು ಬಂದಿದ್ದರು. ಸರ್ಕಾರದ ಕಡೆಯಿಂದ ಎಂದು ತಿಳಿಸಿದ್ದರು. ಮಾಧ್ಯಮದವರು ಏನೆಲ್ಲ ಪ್ರಶ್ನೆ ಕೇಳುತ್ತಾರೋ ಅದೇ ರೀತಿಯ ಪ್ರಶ್ನೆಗಳನ್ನು ಕೇಳಿದರು. ನಾವು ಉತ್ತರ ನೀಡಿದ್ದೇವೆ. ತುಂಬಾ ಹೊತ್ತು ಮನೆಯಲ್ಲಿದ್ದರು.
– ಸುಮತಿ, ಮಂಜುನಾಥ ರಾವ್ ತಾಯಿ
ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿನಿಗೆ ಉಚಿತ ಸೀಟ್, ಪಿಯುಸಿಯ ಟಾಪರ್ಗಳಿಗೆ ಅಮೆರಿಕ ಟೂರ್


LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





