ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಆದ್ದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ (dam) ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

The-Team-PU-College-scaled

ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗದಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ಹಾಗೂ ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bhadra-Dam-General-Image

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಮನೆ ಬಳಿ ದಿಢೀರ್‌ ಪ್ರತ್ಯಕ್ಷವಾದ ಅಪರಿಚಿತರು, ದೇವರ ಹೆಸರಿನಲ್ಲಿ ವಂಚಿಸಿದರು, ಏನಿದು ಕೇಸ್?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment