ಶಿವಮೊಗ್ಗ: ನಗರದ ಕಾಸ್ಮೋ ಕ್ಲಬ್ನಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ಪುಣ್ಯಸ್ಮರಣೆ ನಡೆಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ (Minister) ಕೆ.ಹೆಚ್.ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಧಿಕಾರ ಬರುತ್ತದೆ ಹೋಗುತ್ತದೆ. ಆದರೆ ಮಾಡಿದ ಒಳ್ಳೆಯ ಕೆಲಸಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ. ಮಲೆನಾಡು ಭಾಗದಲ್ಲಿ 250 ಜನ ಇದ್ದರೆ ಮಾತ್ರ ಬೋರ್ವೆಲ್ ತೆಗೆಸಬೇಕು ಎಂಬ ಕಾನೂನಿಗೆ ತಿದ್ದುಪಡಿ ತಂದು ಹತ್ತು ಜನರಿದ್ದರೂ ಬೋರ್ವೆಲ್ ಕೊರಿಸುವ ಮೂಲಕ ಬೇಗಾನೆ ರಾಮಯ್ಯ ನೀರು ನೀಡಿದರು. ಇಂತಹ ಉತ್ತಮ ಕೆಲಸ ಮಾಡಿದವರನ್ನು ಪಕ್ಷಾತೀತವಾಗಿ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದರು.ಕೆ.ಹೆಚ್.ಮುನಿಯಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ
ಬೇಗಾನೆ ರಾಮಯ್ಯ ಅವರನ್ನು ಕಳೆದ ಕೊಂಡದ್ದು ನೋವು ತಂದಿದೆ. ಅವರ ಸಿದ್ದಾಂತಗಳನ್ನು ನಾವು ಅಳವಡಿಸಿಕೊಂಡರೆ ಅವರು ನಮ್ಮ ಜತೆಯಲ್ಲೆ ಇರುತ್ತಾರೆ. ಎಲ್ಲ ಪಕ್ಷದವರು ಅವರ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಅವರ ವ್ಯಕ್ತಿತ್ವವನ್ನು ನಾವೂ ಅಳವಡಿಸಿಕೊಳ್ಳಬೇಕುಮಧು ಬಂಗಾರಪ್ಪ, ಶಾಲಾ ಶಿಕ್ಷಣ ಸಚಿವ
ಬೇಗಾನೆ ರಾಮಯ್ಯ ಅವರ ಕ್ಷೇತ್ರದಲ್ಲಿ ಶಾಸಕನಾಗಿ ಸೇವೆ ಸಲ್ಲಿಸುತ್ತಿರುವುದು ನನಗೆ ಹೆಮ್ಮೆ ತಂದಿದೆ. ರಾಜಕಾರಣಿಗಳು ಎಂದರೆ ಬೇರೆ ದೃಷ್ಟಿಯಲ್ಲಿ ನೋಡುವ ಕಾಲದಲ್ಲಿ ಇದ್ದೇವೆ. ಅಧಿಕಾರ ಇದ್ದಾಗಲು, ಇಲ್ಲದಿದ್ದಾಲೂ ರಾಮಯ್ಯ ಒಂದೆ ರೀತಿ ಇದ್ದರು. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಅವರ ಅಗಲಿಕೆ ಶೃಂಗೇರಿ ಕ್ಷೇತ್ರಕ್ಕೆ ಮಾತ್ರವಲ್ಲ. ದೇಶಕ್ಕೆ ನಷ್ಟ.ರಾಜೇಗೌಡ, ಶೃಂಗೇರಿ ಶಾಸಕ
ಶ್ರೀ ನಂಜಾವಧೂತ ಸ್ವಾಮೀಜಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಜಿ.ಹೆಚ್.ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಗಾಯತ್ರಿ ಶಾಂತನಗೌಡ, ಆರ್. ಪ್ರಸನ್ನಕುಮಾರ್, ಬೇಗಾನೆ ರಾಮಯ್ಯ ಅವರ ಪತ್ನಿ ಸೀತಾ ರಾಮಯ್ಯ, ಮಕ್ಕಳಾದ ಗೋಪಾಲಕೃಷ್ಣ, ಡಾ.ಆರತಿ ಕೃಷ್ಣ, ಅಂಜನ್ ರಾಮಯ್ಯ ಮತ್ತಿತರರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ