ಹೊಳೆಹೊನ್ನೂರು: ಹೇಮಣ್ಣ ಕೊಲೆ ಪ್ರಕರಣದ ಆರೋಪಿ ಮಂಜ ಎಂಬಾತನ ಕಾಲಿಗೆ ಹೊಳಲೂರು ಸಮೀಪ ಪೊಲೀಸರು ಗುಂಡು (fired) ಹಾರಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೆ ಈತ ಹಲ್ಲೆಗೆ ಯತ್ನಿಸಿದ್ದ. ಆಗ ಗುಂಡು ಹಾರಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಈ ಕುರಿತು ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ತಲೆಮರೆಸಿಕೊಂಡಿದ್ದ ಮಂಜನ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು.

ಹೊಳೆಹೊನ್ನೂರು ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಪತಿ ನೇತೃತ್ವದ ತಂಡ ಆತನನ್ನು ಬಂಧಿಸಲು ತೆರಳಿತ್ತು. ಆಗ ಮಂಜ ಪೊಲೀಸ್ ಸಿಬ್ಬಂದಿ ಪ್ರಕಾಶ್ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಲಕ್ಷ್ಮಿಪತಿ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈಚೆಗೆ ಹೊಳೆಹೊನ್ನೂರಿನ ಹೊಸಕೊಪ್ಪದ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಹೇಮಣ್ಣ ಎಂಬುವವರ ಹತ್ಯೆಯಾಗಿತ್ತು. ವಾಕಿಂಗ್ಗೆ ತೆರಳಿದ್ದ ಹೇಮಣ್ಣನ ಮೇಲೆ ದಾಳಿ ನಡೆಸಿ, ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮಂಜ ಪ್ರಮುಖ ಆರೋಪಿಯಾಗಿದ್ದ ಆರೋಪಿಸಲಾಗಿದೆ.


ಇದನ್ನೂ ಓದಿ » ಮನೆಯವರೆಲ್ಲ ಮದುವೆಗೆ ತೆರಳಿದ್ದಾಗ ನೇಣು ಬಿಗಿದು ಯುವಕ ಸಾವು

LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





