ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ಶಿವಮೊಗ್ಗ: ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ (jewels) ಕಳ್ಳತನ ಮಾಡಲಾಗಿದೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಡಿ ಬ್ಲಾಕ್‌ನಲ್ಲಿರುವ ಪ್ರವೀಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಪ್ರವೀಣ ತಮ್ಮ ಪತ್ನಿಯೊಂದಿಗೆ ಶಿಕಾರಿಪುರದಲ್ಲಿರುವ ತಮ್ಮ ಸಂಬಂಧಿಯ ಮನೆಯಲ್ಲಿ ಪೂಜೆಗೆ ತೆರಳಿದ್ದರು. ಮರುದಿನ ಬೆಳಗ್ಗೆ 6 ಗಂಟೆ ಹೊತ್ತಿಗೆ ಅಕ್ಕಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲಿನ ಬೀಗ ಒಡೆದು ಕಳ್ಳತನ ಮಾಡಲಾಗಿದೆ ಎಂದು ತಿಳಿಸಿದ್ದರು. ಕೂಡಲೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಚಿನ್ನಾಭರಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.‌

SLV-BOOK-SHOP-SHIMOGA

ಮನೆಯ ಬೀರುವಿನಲ್ಲಿಟ್ಟಿದ್ದ 5 ಸಾವಿರ ರೂ. ನಗದು, 20 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-ADMISSION-2025-26

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 20, 2025 at 7:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 20, 2025

Leave a Comment