ಶಿವಮೊಗ್ಗ: ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ (jewels) ಕಳ್ಳತನ ಮಾಡಲಾಗಿದೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಡಿ ಬ್ಲಾಕ್ನಲ್ಲಿರುವ ಪ್ರವೀಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಪ್ರವೀಣ ತಮ್ಮ ಪತ್ನಿಯೊಂದಿಗೆ ಶಿಕಾರಿಪುರದಲ್ಲಿರುವ ತಮ್ಮ ಸಂಬಂಧಿಯ ಮನೆಯಲ್ಲಿ ಪೂಜೆಗೆ ತೆರಳಿದ್ದರು. ಮರುದಿನ ಬೆಳಗ್ಗೆ 6 ಗಂಟೆ ಹೊತ್ತಿಗೆ ಅಕ್ಕಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲಿನ ಬೀಗ ಒಡೆದು ಕಳ್ಳತನ ಮಾಡಲಾಗಿದೆ ಎಂದು ತಿಳಿಸಿದ್ದರು. ಕೂಡಲೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಚಿನ್ನಾಭರಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಮನೆಯ ಬೀರುವಿನಲ್ಲಿಟ್ಟಿದ್ದ 5 ಸಾವಿರ ರೂ. ನಗದು, 20 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

