ಶಿವಮೊಗ್ಗ: ATM ಮೆಷಿನ್ನಲ್ಲಿ ಡ್ರಾ ಮಾಡಿದ ಹಣ ಬಾರದೆ ಇರುವ ಕುರಿತು ಮೂರು ಪ್ರತ್ಯೇಕ ದೂರು ಬಂದ ಹಿನ್ನೆಲೆ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಗಮ್ ಟೇಪ್ ಮಾದರಿ ವಸ್ತು ಅಂಟಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಂಚಕನ ವಿರುದ್ಧ ಕೆನರಾ ಬ್ಯಾಂಕ್ ಸಿಬ್ಬಂದಿ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೇ 13ರಂದು ಮೂರು ಪ್ರತ್ಯೇಕ ಗ್ರಾಹಕರು ಪ್ರತ್ಯೇಕ ಸಮಯದಲ್ಲಿ ಎಟಿಎಂನಿಂದ ಹಣ ಬಿಡಿಸಿಕೊಳ್ಳಲು ಬಂದಿದ್ದರು. ಎಟಿಎಂನಿಂದ ಹಣ ಬಾರದಿದ್ದರು ಅಕೌಂಟ್ನಲ್ಲಿ ಹಣ ಕಡಿತವಾಗಿತ್ತು. ಈ ಸಂಬಂಧ ಕೆನರಾ ಬ್ಯಾಂಕ್ಗೆ ಮೂರು ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿನ್ನೆಲೆ ಎಟಿಎಂ ಕೇಂದ್ರದಲ್ಲಿ ಸಿಸಿಟಿವಿ ಪರಿಶೀಲಿಸಿದಾಗ ವಂಚಕನ ಕೃತ್ಯ ಬೆಳಕಿಗೆ ಬಂದಿದೆ.

ಸಿಸಿಟಿವಿಯಲ್ಲಿ ಏನಿತ್ತು?
ಮೇ 13ರ ರಾತ್ರಿ ವಿನೋಬನಗರದ 100 ಅಡಿ ರಸ್ತೆಯ ಕೆನರಾ ಬ್ಯಾಂಕ್ ಎಟಿಎಂನೊಳಗೆ ಬಂದ ಅಪರಿಚಿತನೊಬ್ಬ ಹಣ ಹೊರ ಬರುವ ಜಾಗದಲ್ಲಿ ಗಮ್ ಟೇಪ್ ಮಾದರಿ ವಸ್ತು ಅಂಟಿಸಿ ಹೋಗಿದ್ದ. ನಂತರ ಬಂದ ಗ್ರಾಹಕರೊಬ್ಬರು ಎಟಿಎಂನಿಂದ 6 ಸಾವಿರ ರೂ. ಹಣ ಬಿಡಿಸಿಕೊಳ್ಳಲು ಯತ್ನಿಸಿದ್ದು, ಹಣ ಎಟಿಎಂನಿಂದ ಹೊರಬಂದಿರಲಿಲ್ಲ. ಹಾಗಾಗಿ ಗ್ರಾಹಕ ಬರಿಗೈಲಿ ಹಿಂತಿರುಗಿದ್ದರು. ಕೂಡಲೆ ಒಳ ಬಂದ ಅಪರಿಚಿತ ಗಮ್ ಟೇಪ್ ತೆಗೆದು, ಹಣ ತೆಗೆದುಕೊಂಡು ಹೋಗಿದ್ದ. ಇದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಸ್ವಲ್ಪ ಹೊತ್ತಿಗೆ ಮತ್ತಿಬ್ಬರು ಗ್ರಾಹಕರು ಬಂದಿದ್ದು ಅವರಿಗು ಕೂಡ ಹಣ ಬಂದಿರಲಿಲ್ಲ. ಅವರು ಎಟಿಎಂನಿಂದ ಹೊರ ಹೋಗುತ್ತಿದ್ದಂತೆ ಅಪರಿಚಿತ ವ್ಯಕ್ತಿ ಒಳಗೆ ಬಂದು, ಗಮ್ ಟೇಪ್ ತೆಗೆದು ಹಣ ತೆಗೆದುಕೊಂಡು ಹೋಗಿದ್ದ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಟ್ಟು 16,500 ರೂ. ವಂಚನೆಯಾಗಿದೆ ಎಂದು ಆರೋಪಿಸಲಾಗಿದೆ.

ಜೆಎನ್ಎನ್ ಕಾಲೇಜು ಬಳಿ ಕೃತ್ಯ
ಇನ್ನೊಂದೆಡೆ ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಬಳಿ ಎಟಿಎಂ ಕೇಂದ್ರದಲ್ಲಿಯು ಇದೇ ರೀತಿ ಕೃತ್ಯ ನಡೆದಿದೆ. ಹಣ ಡ್ರಾ ಆಗುವ ಸ್ಥಳದಲ್ಲಿ ಅಪರಿಚಿತನೊಬ್ಬ ಗಮ್ ಟೇಪ್ ಅಂಟಿಸಿದ್ದ. ಬಳಿಕ ಅದನ್ನು ಬ್ಲೇಡ್ನಿಂದ ಕಟ್ ಮಾಡಿ ತೆಗೆದಿದ್ದಾನೆ. ಹಾಗಾಗಿ ಎಟಿಎಂ ಮೆಷಿನ್ಗೆ ತರಚಿದಂತಾಗಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್ ಸಿಬ್ಬಂದಿ ವಿನೋಬನಗರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






