ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

ಶಿವಮೊಗ್ಗ: ಪವಿತ್ರ ಕ್ಷೇತ್ರ ಕೂಡ್ಲಿ ಬಳಿ ತುಂಗಾ ಭದ್ರಾ ನದಿಯಲ್ಲಿ ಮರಳುಗಾರಿಕೆ (Sand Mining) ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕರೆದಿರುವ ಟೆಂಡರ್‌ ಅನ್ನು ತಕ್ಷಣ ಕೈಬಿಡಬೇಕು ಎಂದು ಬಿಜೆಪಿ ಮುಖಂಡ ಗಿರೀಶ್ ಭದ್ರಾಪುರ ಆಗ್ರಹಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡ್ಲಿ ಕ್ಷೇತ್ರ ಹಾಗೂ ಭಕ್ತಾದಿಗಳ ಹಿತಕ್ಕಾಗಿ ಈ ಭಾಗದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ನಿರಂತರವಾಗಿ ಆಕ್ಷೇಪಿಸುತ್ತಾ ಬರಲಾಗಿದೆ. ಗಣಿ ಇಲಾಖೆ ಅಧಿಕಾರಿಗಳು ಸ್ಥಳ ಪರೀಕ್ಷೆ ನಡೆಸಿ ಗಣಿಗಾರಿಕೆ ಅನುಮತಿ ನೀಡುವ ನಿಯಮ ಪಾಲಿಸುತ್ತಿಲ್ಲ. ಲಂಚದ ಆಸೆಗೆ ಅನುಮತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

stop-sand-mining-at-kudli-in-shimoga

ಈ ಭಾಗದಲ್ಲಿ ಮರಳುಗಾರಿಕೆಗೆ ಅವಕಾಶ ನೀಡದಂತೆ ದೇವಸ್ಥಾನ ಸಮಿತಿ ಮತ್ತು ಸ್ಥಳೀಯರು ಹಲವು ಬಾರಿ ಭೂ ವಿಜ್ಞಾನ ಇಲಾಖೆಗೆ ಮನವಿ ನೀಡಿದ್ದಾರೆ. ಆದರೆ ಇಲಾಖೆ ಮನವಿಗೆ ಯಾವುದೆ ಸ್ಪಂದನೆ ನೀಡಿಲ್ಲ. 2018ರಲ್ಲಿ ಈ ಭಾಗದಲ್ಲಿ ಮರಳು ಗಣಿಗೆ ಟೆಂಡರ್ ಕರೆದಾಗ ಸಂಸದ ಬಿ.ವೈ.ರಾಘವೇಂದ್ರ, ಅಂದಿನ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌, ಕೂಡ್ಲಿ ಗ್ರಾಮಸ್ಥರು ಹಾಗೂ ಭಕ್ತರು ಗಣಿಗಾರಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದರು. ಆಗ ಸುಮ್ಮನಾಗಿ ಈಗ ಮತ್ತೆ ಟೆಂಡರ್ ಕರೆದಿದ್ದಾರೆ ಎಂದು ತಿಳಿಸಿದರು.

Kalleshwara-Enterprises.webp

SLV-BOOK-SHOP-SHIMOGA

ಸುದ್ದಿಗೋಷ್ಠಿಯಲ್ಲಿ ಮಂಜುನಾಥ್, ಲಕ್ಷ್ಮಣ್, ರಾಮಕೃಷ್ಣ, ಕಾಂತರಾಜ್, ಹಾಲೇಶ್ ಮತ್ತಿತರರಿದ್ದರು.

ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment