ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. (tour)
ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಿಲ್ಲಾ ಹಾಪ್ಕಾಮ್ಸ್ ಹಣ್ಣು– ತರಕಾರಿ ಮೇಳ ಉದ್ಘಾಟಿಸುವರು. 11.30ಕ್ಕೆ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ (ಗೋಪಿ ವೃತ್ತ) ಮಹಾನಗರ ಪಾಲಿಕೆಯ ವಲಯ ಕಚೇರಿ ಉದ್ಘಾಟಿಸುವರು. ಮಧ್ಯಾಹ್ನ 12ಕ್ಕೆ ಬೊಮ್ಮನಕಟ್ಟೆಯಲ್ಲಿ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್ ಮೊಬೈಲ್ ಸ್ವಿಚ್ ಆಫ್
