ಶಿವಮೊಗ್ಗ: ವಾಹನಗಳ ಹರಾಜಿನಲ್ಲಿ (Auction) ಭಾಗವಹಿಸಿ ಅಧಿಕ ಕಮಿಷನ್ ಪಡೆಯಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ. ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದ ವ್ಯಕ್ತಿಗೆ ಈ ಆಮಿಷವೊಡ್ಡಿ ಹಣ ವರ್ಗಾಯಿಸಿಕೊಳ್ಳಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಏನಿದು ಪ್ರಕರಣ? ವಂಚನೆ ಆಗಿದ್ದೇಗೆ?
ಶಿವಮೊಗ್ಗದ ವ್ಯಕ್ತಿಯೊಬ್ಬರು ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು. ಅದರಲ್ಲಿ ವಾಹನಗಳ ಹರಾಜು ಕುರಿತು ಮಾಹಿತಿ ಹಂಚಿಕೊಳ್ಳಲಾಗಿತ್ತು. ಹರಾಜಿನಲ್ಲಿ ಭಾಗವಹಿಸಿ ಅಧಿಕ ಕಮಿಷನ್ ಸಂಪಾದಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ಶಿವಮೊಗ್ಗದ ವ್ಯಕ್ತಿ ಹರಾಜಿನಲ್ಲಿ ಭಾಗವಹಿಸಿದ್ದರು.

ವಾಟ್ಸಪ್ ಗ್ರೂಪ್ನಲ್ಲಿ ತಿಳಿಸಿದಂತೆ ಅವರು ಸೂಚಿಸಿದ ಯು.ಪಿ.ಐ ಐಡಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಏಪ್ರಿಲ್ 5 ರಿಂದ ಮೇ 15ರವರೆಗೆ ಹಂತ ಹಂತವಾಗಿ ಒಟ್ಟು 25.42 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಕೊನೆಗೆ ವಾಹನವನ್ನು ನೀಡಿದೆ, ಕಮಿಷನ್ ಹಣವನ್ನು ನೀಡದೆ ಇದ್ದಾಗ ಶಿವಮೊಗ್ಗದ ವ್ಯಕ್ತಿ ವಿಚಾರಿಸಿದ್ದಾರೆ. ಆಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ.
ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ನೇಣು ಬಿಗಿದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೃತದೇಹ ಪತ್ತೆ

LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






