ಹೊಸನಗರ: ಲಾರಿ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಹೊಸನಗರ ತಾಲ್ಲೂಕಿನ ನಗರ ಸಮೀಪದ ಶಾಂತಿಕೆರೆ ಬಳಿಯ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 766 ಸಿ ಮಾರ್ಗದಲ್ಲಿ ಡಿಕ್ಕಿ ಸಂಭವಿಸಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಕುಂದಾಪುರ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಕಾರಗಡಿಯಿಂದ ಚಕ್ಕಾರಿನೆಡೆ ಮದುವೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದ ತಲನೇರಿ ಶೇಖರಪ್ಪ ಗೌಡ ಮತ್ತು ನವೀನಾ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ನಗರ ಪೊಲೀಸ್ ಠಾಣೆ ಎಎಸ್ಐ ಕುಮಾರ್ ಮತ್ತು ಸಿಬ್ಬಂದಿ ಸಂಚಾರ ಸುಗಮಗೊಳಿಸಿದರು.





ಇದನ್ನೂ ಓದಿ » ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?
