ಕೋವಿಡ್‌ಗೆ ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿ ಬಲಿ, ಸೋಂಕಿತರ ಸಂಖ್ಯೆ ಹೆಚ್ಚಳ, ಎಷ್ಟಿವೆ ಸಕ್ರಿಯ ಪ್ರಕರಣ?

ಬೆಂಗಳೂರು: ದಾವಣಗೆರೆಯಲ್ಲಿ ಕೋವಿಡ್ (Covid) ಸೋಂಕಿನಿಂದ 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇವರು ಶ್ವಾಸಕೋಶ ಸಂಬಂಧಿ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದರೊಂದಿಗೆ, ಪ್ರಸಕ್ತ ವರ್ಷ ರಾಜ್ಯದಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು 796 ಜನರಲ್ಲಿ ಸೋಂಕು ದೃಢಪಟ್ಟಿದೆ.

https://chat.whatsapp.com/JPJ0lTQsTKf365Fqu6Q7cd

ಗುರುವಾರ 644 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 66 ಹೊಸ ಪ್ರಕರಣಗಳು ಪತ್ತೆಯಾಗಿವೆ. ಪ್ರಸ್ತುತ ರಾಜ್ಯದಲ್ಲಿ 451 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಅವರಲ್ಲಿ 446 ಜನರು ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ » ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 6, 2025 at 11:45 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 6, 2025

Leave a Comment