ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (DCC BANK) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು (Properties) ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರ ಅಡಿಯಲ್ಲಿ ಆರ್.ಎಂ.ಮಂಜುನಾಥ ಗೌಡ ಮತ್ತು ಅವರ ಪತ್ನಿಯ ಹೆಸರಿನಲ್ಲಿರುವ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಏಪ್ರಿಲ್ 8ರಂದು ಶಿವಮೊಗ್ಗ ಮತ್ತು ಬೆಂಗಳೂರಿನ ವಿವಿಧೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭ ಡಿಜಿಟಲ್ ಸಾಕ್ಷಿ ಸೇರಿದಂತೆ ವಿವಿಧ ಸಾಕ್ಷಿ ಲಭ್ಯವಾಗಿತ್ತು. ಅಲ್ಲದೆ 2.5 ಕೆ.ಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿತ್ತು. ಏಪ್ರಿಲ್ 9ರಂದು ಮಂಜುನಾಥ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಮಂಜುನಾಥ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ » ರಾಜ್ಯದಲ್ಲಿ ಸದ್ಯಕ್ಕೆ ಮುಂಗಾರು ದುರ್ಬಲ, ಇನ್ನಷ್ಟು ದಿನ ಮಳೆ ಇಲ್ಲ, ಕಾರಣವೇನು?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





