ತುರ್ತಾಗಿ ತನಿಖಾ ಆಯೋಗ ನೇಮಿಸಬೇಕು, ಶಿವಮೊಗ್ಗ ಸಮಾವೇಶದಲ್ಲಿ ಸಾಹಿತಿಗಳ ಪಟ್ಟು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕನ್ನಡ ನಾಡು ನುಡಿ ಜಾಗೃತಿ ಸಮಿತಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಹೋರಾಟ, ಕನ್ನಡಿಗರ ಜಾಗೃತಿ ಸಮಾವೇಶ ನಡೆಯಿತು. ಡಾ. ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಡೊಳ್ಳು ಬಾರಿಸಿ ಚಾಲನೆ ನೀಡಿದರು. (Protest)

‘ತನಿಖಾ ಆಯೋಗ ನೇಮಿಸೇಕಿದೆ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ತನಿಖಾ ಆಯೋಗ ರಚಿಸುವಂತೆ ಆಗ್ರಹಿಸಿದರು. ಇಲ್ಲಿದೆ ಸಾಹಿತಿ ಸಿದ್ದರಾಮಯ್ಯ ಅವರ ಭಾಷಣದ 5 ಪ್ರಮುಖಾಂಶಗಳು.

Point 1 F1F1F1ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರನ್ನು ಅಮಾನತಿನಲ್ಲಿರಿಸಿ, ಸರ್ಕಾರವು ತುರ್ತಾಗಿ ತನಿಖಾ ಆಯೋಗ ನೇಮಿಸಬೇಕಿದೆ. ತನಿಖೆಯಲ್ಲಿ ಕಳಂಕಿತ ಎಂದು ಸಾಬೀತಾದರೆ ವಜಾ ಮಾಡಿ. ಇಲ್ಲವಾದರೆ ಅಮಾನತು ರದ್ದುಪಡಿಸಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ.

Kannadigara-Jagruthi-samavesha-in-Shimoga

Point 2 F1F1F1ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳನ್ನು ಪಕ್ಷ ರಾಜಕಾರಣದ ಬೇಳೆ ಬೇಯಿಸಿಕೊಳ್ಳುವ ವೇದಿಕೆಯಾಗಿ ಅವಕಾಶ ಮಾಡಬೇಡಿ. ಸಮ್ಮೇಳನಕ್ಕೆ ಖರ್ಚು ಮಾಡುವ ಕೋಟಿಗಟ್ಟಲೆ ಹಣವನ್ನು ಬಡ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿ.

Point 3 F1F1F1ಮಹೇಶ್ ಜೋಷಿಗೆ ನೀಡಿದ್ದ ಸಚಿವ ಸ್ಥಾನಮಾನವನ್ನು ತೆಗೆದು ಹಾಕಿದ ಸರ್ಕಾರಕ್ಕೆ ನಮ್ಮ ಅಭಿನಂದನೆ. ಕಸಾಪದಲ್ಲಿ ನಡೆಯುತ್ತಿರುವ ಆತ್ಮಹೀನ ನಡವಳಿಕೆ ನಿಲ್ಲಬೇಕು. ಅಧಿಕಾರಿಗಳು ನಿವೃತ್ತರಾಗಿ ಕಸಾಪದ ರಾಜ್ಯಾಧ್ಯಕ್ಷರಂತಹ ಹುದ್ದೆಗಳಿಗೆ ಹೋದಾಗ ಇಂತಹ ಅನಾಹುತವಾಗುತ್ತದೆ.

Point 4 F1F1F1ಕಸಾಪ ಚುನಾವಣೆಯ ಕ್ರಮವನ್ನು ಮಾಲಿನ್ಯಗೊಳಿಸಿದ ವ್ಯಕ್ತಿ ಮಹೇಶ್ ಜೋಷಿ. ಪಕ್ಷ ರಾಜಕಾರಣದ ಕೊಳಕನ್ನು ಕಸಾಪಗೆ ತಂದಿದ್ದಾರೆ. ಸಾಹಿತ್ಯಿಕ ಮನಸ್ಸು ಇಲ್ಲದವರಲ್ಲಿ ಸರ್ವಾಧಿಕಾರದ ಧೋರಣೆ ಇರುತ್ತದೆ.

Point 5 F1F1F1ಶಿವಮೊಗ್ಗ ಜಿಲ್ಲೆಯ ಪ್ರಜಾಸತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೂಲ ಸದಸ್ಯತ್ವವನ್ನೆ ಕಿತ್ತುಹಾಕುವ ದುರಾಹಂಕಾರದ ಠೇಂಕಾರದ ವಿರುದ್ಧ ನಾವೆಲ್ಲ ಹೋರಾಡಬೇಕಿದೆ. ನಮ್ಮ ಹೋರಾಟ ಸತ್ಯಾಗ್ರಹಕ್ಕೆ ಪೂರಕವಾಗಿದೆ‌.

Kannadigara-Jagruthi-samavesha-in-Shimoga

ಸರ್ಕಾರದಿಂದ ಕಸಾಪ ರಾಜ್ಯಾಧ್ಯಕ್ಷರಿಗೆ ಅಂಕುಶ ಹಾಕಿ ಎಂಬ ಒತ್ತಾಯ ಮಾಡಬೇಕಾದ ಅನಿವಾರ್ಯತೆ ಆಜೀವ ಸದಸ್ಯರಾದ ನಮ್ಮದಾಗಿದೆ. ಸ್ವಾಭಿಮಾನಹೀನ ವ್ಯಕ್ತಿಯೊಬ್ಬ ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ್ದು ವಿಷಾದನೀಯ.ಬಂಜಗೆರೆ ಜಯಪ್ರಕಾಶ್, ಕರ್ನಾಟಕ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ

https://chat.whatsapp.com/JPJ0lTQsTKf365Fqu6Q7cd

ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶಗೌಡ, ರೈತ ನಾಯಕಿ ಸುನಂದ ಜಯರಾಮ್, ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ಹೋರಾಟಗಾರ್ತಿ ಕೆ.ಎಸ್.ನಿರ್ಮಲ, ಮೀರಾ ಶಿವಲಿಂಗಯ್ಯ, ಕಲ್ಕುಳಿ ವಿಠಲಹೆಗಡೆ, ಆರ್.ಜೆ.ಹಳ್ಳಿ ನಾಗರಾಜ, ರೋಹಿದಾಸ ನಾಯಕ್ ಮಾತನಾಡಿದರು.

Kannadigara-Jagruthi-samavesha-in-Shimoga

ಸಮಾಜವಾದಿ ನಾಯಕ ಪಿ.ಪುಟ್ಟಯ್ಯ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಡಾ.ಹೆಚ್.ಟಿ.ಕೃಷ್ಣಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಸಂಚಾಲಕ ಕೆ.ಪಿ.ಶ್ರೀಪಾಲ್ ಸ್ವಾಗತಿಸಿದರು. ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕ ಡಾ.ಹೆಚ್.ಟಿ.ಕೃಷ್ಣಮೂರ್ತಿ, ಅಕ್ಷತಾ ಹುಂಚದಕಟ್ಟೆ ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಕ್ರೀದ್‌, ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 7, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment