ಶಿವಮೊಗ್ಗದ ಅಂಗನವಾಡಿಗಳಿಗೆ ಲೋಕಾಯುಕ್ತರು ದಿಢೀರ್ ಭೇಟಿ, ಪರಿಶೀಲನೆ ವೇಳೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳ ಎರಡು ತಂಡ ಶಿವಮೊಗ್ಗ ತಾಲೂಕಿನ ವಿವಿಧ ಅಂಗನವಾಡಿಗಳಿಗೆ ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಈ ವೇಳೆ ಹಲವು ನ್ಯೂನತೆ ಕಂಡು ಬಂದಿದೆ. ಒಂದು ವಾರದೊಳಗೆ ಸಮಸ್ಯೆ ಪರಿಹರಿಸಿ ವರದಿ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ್‌ ಮತ್ತು ಇನ್ಸ್‌ಪೆಕ್ಟರ್‌ ವೀರಬಸಪ್ಪ ಎಲ್‌.ಕುಸಲಾಪುರ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿತ್ತು. ಆಯನೂರು ವ್ಯಾಪ್ತಿಯ 4 ಅಂಗನವಾಡಿಗಳು, ಕುಂಸಿ ವ್ಯಾಪ್ತಿಯ 4 ಅಂಗನವಾಡಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿತು.

https://chat.whatsapp.com/JPJ0lTQsTKf365Fqu6Q7cd

ಏನೇನೆಲ್ಲ ನ್ಯೂನತೆ ಕಾಣಿಸಿತು?

  • ಪುಷ್ಠಿ ಆಹಾರದ ಪ್ಯಾಕೇಟ್ ಮೇಲೆ ಉತ್ಪಾದನಾ ದಿನಾಂಕ ಮತ್ತು ಅವಧಿ ಮೀರಿದ ದಿನಾಂಕ ನಮೂದು ಮಾಡಿಲ್ಲ.

[su_divider top=”no” divider_color=”#8e8e8e” link_color=”#000000″ size=”2″ margin=”5″]

  • ವೈದ್ಯಾಧಿಕಾರಿಕಾರಿಗಳು ಮೂರು ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ಮಾಡುತ್ತಿಲ್ಲ. ಮೇಲ್ವಿಚಾರಕರು ನಿರಂತರವಾಗಿ ಅಂಗನವಾಡಿ ಕೇಂದ್ರಗಳಿಗೆ ಬೇಟಿ ನೀಡಿಲ್ಲ.

[su_divider top=”no” divider_color=”#8e8e8e” link_color=”#000000″ size=”2″ margin=”5″]

  • ಸ್ಟೋರ್ ರೂಂನಲ್ಲಿ ಸ್ವಚ್ಚತೆಯನ್ನು ನಿರ್ವಹಣೆ ಮಾಡಿಲ್ಲ. ವಾಟರ್ ಪಿಲ್ಟರ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಂಗನಡಾಡಿ ಕೇಂದ್ರಗಳ ಸುತ್ತಲು ಸ್ವಚ್ಛತೆ ಇಲ್ಲ. ಅಳವಡಿಸಿರುವ ಯು.ಪಿ.ಎಸ್‌ ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ.

[su_divider top=”no” divider_color=”#8e8e8e” link_color=”#000000″ size=”2″ margin=”5″]

  • ಇಂದು ತಯಾರಿಸಿದ ಉಪ್ಪಿಟ್ಟಿನಲ್ಲಿ ಯಾವುದೇ ತರಕಾರಿ ಬಳಸಿಲ್ಲ. ಕೋಹಳ್ಳಿ ಪೇಟೆ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಅವಧಿ ಮೀರಿದ ರಾಗಿ ಹಿಟ್ಟು ಬಳಸುತ್ತಿರುವುದು ಕಂಡುಬಂದಿದೆ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

[su_divider top=”no” divider_color=”#8e8e8e” link_color=”#000000″ size=”2″ margin=”5″]

  • ಮೇಲಾಧಿಕಾರಿಗಳ ಮೊಬೈಲ್ ನಂಬರ್ ಮತ್ತು ಸಹಾಯವಾಣಿ ಚಾರ್ಟ್ ಹಾಕಿಲ್ಲ. ಶೌಚಾಲಯದಲ್ಲಿ ಬೆಳಕಿನ ವ್ಯವಸ್ಥೆ ಮತ್ತು ಸರಿಯಾದ ನೀರಿನ ವ್ಯವಸ್ಥೆ ಇಲ್ಲ.

[su_divider top=”no” divider_color=”#8e8e8e” link_color=”#000000″ size=”2″ margin=”5″]

  • ಆಹಾರ ದಾಸ್ತಾನು ರಿಜಿಸ್ಟರ್ (ಸ್ಟಾಕ್ ರಿಜಿಸ್ಟರ್) ಮತ್ತು ಖರ್ಚಿನ ರಿಜಿಸ್ಟರ್‌ಗೆ ಸರಿಯಾಗಿ ಹೊಂದಾಣಿಕೆ ಆಗಲಿಲ್ಲ. ಅಂಗನವಾಡಿ ಕೇಂದ್ರದಲ್ಲಿ ಇರುವ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸಿಲ್ಲ.

[su_divider top=”no” divider_color=”#8e8e8e” link_color=”#000000″ size=”2″ margin=”5″]

Lokayukta-sudden-visit-to-anganavadis

[su_note note_color=”#f1f1f1″ text_color=”#000000″ radius=”0″]

ರಜೆಯಂದು ಹಾಜರಾತಿ ಪುಸ್ತಕದಲ್ಲಿ ಸಹಿ

ಆಯನೂರು-01 ಅಂಗನವಾಡಿ ಕೇಂದ್ರ ಶಿಥಿಲಾವಸ್ಥೆಯಲ್ಲಿದೆ. ಆಯನೂರು -02 ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆ ಜೂ.7ರಂದು ಹಾಜರಾತಿ ಪುಸ್ತಕದಲ್ಲಿ ಆಕಸ್ಮಿಕ ರಜೆ ಎಂದು, ಮತ್ತು ಅಂಗನವಾಡಿ ಸಹಾಯಕಿ ಸಹಿಯನ್ನು ಮಾಡಿದ ನಮೂದು ಕಂಡುಬಂದಿದೆ. ಆದರೆ ಆ ದಿನ ಬಕ್ರಿದ್ ಹಬ್ಬದ ಸರ್ಕಾರಿ ರಜೆ ಇತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.[/su_note]

ಲೋಕಾಯುಕ್ತ ಎಸ್‌.ಪಿ ಮಂಜುನಾಥ ಚೌದರಿ ಮಾರ್ಗದರ್ಶನದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಾಗಿತ್ತು. ಹಲವು ನ್ಯೂನತೆಗಳು ಕಂಡು ಬಂದಿದ್ದು, ಇನ್ನೊಂದು ವಾರದೊಳಗೆ ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸುವಂತೆ ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment