ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ (Tree) ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ.

ಚೆಕ್‌ ಪೋಸ್ಟ್‌ನ ಸಹಿನದಲ್ಲಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ. ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.

Tree-falls-to-Shimoga-Thirthahalli-Road-at-gajanuru

ಈಗ ಹೆದ್ದಾರಿ ಪಕ್ಕದಲ್ಲಿರುವ ಕಿರಿದಾದ ದಾರಿಯ ಮೂಲಕ ವಾಹನಗಳು ಸಂಚರಿಸುತ್ತಿವೆ. ಸದ್ಯ ಆಲದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇನ್ನು, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗುತ್ತಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment