ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ (Rainfall). ಹಲವೆಡೆ ಮರಗಳು ಧರೆಗುರುಳಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇನ್ನೊಂದೆಡೆ ಗುರುವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳಗೆ ನಗರದಲ್ಲಿ ಭಾರಿ ಮಳೆಯಾಯಿತು. ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ಹರಿದಿತ್ತು. ತಾಲೂಕು ಕಚೇರಿ ಮುಂಭಾಗ ಮರ ಬಿದ್ದು ರಸ್ತೆ ಬದಿಯಲ್ಲಿದ್ದ ಶೆಡ್ಗಳಿಗೆ ಹಾನಿಯಾಗಿದೆ.

ಶಿವಮೊಗ್ಗ – ತೀರ್ಥಹಳ್ಳಿಯ ಹೆದ್ದಾರಿಯಲ್ಲಿ ಗಾಜನೂರಿನ ಚೆಕ್ಪೋಸ್ಟ್ ಸಮೀಪ ಆಲದ ಮರ ಧರೆಗುರುಳಿತ್ತು. ಇದರಿಂದ ಈ ರಸ್ತೆಯಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

ಶಿವಮೊಗ್ಗ ಜಿಲ್ಲೆಯ ಹಲವು ಕಡೆ ಇವತ್ತು ಮಳೆಯಾಗಿದೆ. ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಭಾರಿ ಮಳೆಯಾಗಿದೆ. ಭದ್ರಾವತಿಯ ವಿವಿಧೆಡೆಯು ಮಳೆಯಾಗಿದೆ.


ಇದನ್ನೂ ಓದಿ » ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್ಚೇಂಜ್ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್ ಉದ್ಯೋಗಿಗಳಿಗೆ ಭರ್ಜರಿ ಆಫರ್

LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು







