ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಾದ್ಯಂತ ಸೋಮವಾರ ಜೋರು ಗಾಳಿ ಸಹಿತ ಭಾರಿ ಮಳೆಯಾಗಿದೆ (Rainfall). ಇದರಿಂದ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ. ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಇನ್ನು, ಮಳೆಯಿಂದಾಗಿ ಜಿಲ್ಲೆಯ ಹಲವು ಕಡೆ ಹಾನಿಯು ಸಂಭವಿಸಿದೆ.

ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ ಭಾರಿ ಮಳೆಯಾಗಿದೆ. ಈ ಭಾಗದಲ್ಲಿಯೇ ಹೆಚ್ಚು ಹಾನಿ ಸಂಭವಿಸಿದೆ.

ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಟಾಪ್‌ ನ್ಯೂಸ್‌

ಮನೆ ಗೋಡೆ ಕುಸಿತ

Speed News 1ಹೊಸನಗರ: ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಗಿ ನಿವಾಸಿ ವಿಶ್ವನಾಥ್‌ ಅವರ ಮನೆ ಮತ್ತು ಕೊಟ್ಟಿಗೆಯ ಗೋಡೆ ಕಸಿದಿದೆ. ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ವಿಶ್ವನಾಥ್‌, ಪತ್ನಿ ಮತ್ತು ಮಕ್ಕಳು ಅಪಾಯದಿಂದ ಪರಾಗಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಸತೀಶ್‌ ಸೊನಲೆ ಸೇರಿದ ಹಲವರು ಸ್ಥಳಕ್ಕೆ ಭೇಟಿ ನೀಡಿದ್ದರು.

ಭೂಮಿಯಲ್ಲಿ ಬಿರುಕು

Speed News 2ಹೊಸನಗರ: ಕುಂದಗಲ್‌ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಸುಮಾರು 200 ಮೀಟರ್‌ನಷ್ಟು ಉದ್ದದ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಭೂಮಿ ಕುಸಿದಿತ್ತು.

landslide-at-Hosanagara

ಎಲ್ಲ ಗೇಟ್‌ ಓಪನ್‌

Speed News 3ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ್ದರಿಂದ ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಿತ್ತು. ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. 21 ಗೇಟ್‌ಗಳನ್ನು ತೆರೆದು ನೀರು ಹೊರ ಬಿಡುತ್ತಿದ್ದು, ನದಿಯಲ್ಲಿ ನೀರಿನ ಮಟ್ಟ ಏರಿಕೆಯಗಿದೆ. ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮುಳುಗಿತ್ತು.

tunga-dam-water-release-and-mantapa-in-shimoga

ಗೋಡೆ ಕುಸಿತ, ವೃದ್ಧೆ ಸಾವು

Speed News 4ಶಿವಮೊಗ್ಗ: ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ವೃದ್ಧೆ ಸಿದ್ದಮ್ಮ ಮೃತಪಟ್ಟಿದ್ದಾರೆ. ಮನೆಯಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಅವರಿಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.

House-wall-collapse-at-mandagatta

ಜೋಗ ನೋಡಲು ಪ್ರವಾಸಿಗರ ದಂಡು

Speed News 5ಸಾಗರ: ಮಳೆಯಿಂದಾಗಿ ಜೋಗ ಜಲಪಾತಕ್ಕೆ ಜೀವ ಕಳೆ ಬಂದಿದೆ. ರಾಜಾ, ರಾಣಿ, ರೋರರ್‌, ರಾಕೆಟ್‌ ಜಲಪಾತಗಳು ಮೈದುಂಬಿಕೊಂಡಿವೆ. ಜಲಪಾತ ವೀಕ್ಷಣೆಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.

tourists-visit-jog-falls.

ಅಂಗನವಾಡಿ ಮೇಲೆ ಬಿದ್ದ ಮರ

Speed News 6ತೀರ್ಥಹಳ್ಳಿ: ಹಿರೇಬೈಲು ಮಜರೆ ಹಳ್ಳಿಯ ಅಂಗನವಾಡಿ ಕಟ್ಟಡದ ಮೇಲೆ ಮರ ಬಿದ್ದಿದೆ. ಗೋಡೆಗೆ ಹಾನಿಯಾಗಿದೆ. ಮುಂಜಾಗ್ರತೆ ಕ್ರಮವಾಗಿ ಇಲ್ಲಿನ ಅಂಗನವಾಡಿಯನ್ನು ಕುಡುವಳ್ಳಿಯ ಸರ್ಕಾರಿ ಶಾಲೆ ಆವರಣಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದೆ.

ಮನೆ ಗೋಡೆ ಕುಸಿತ

Speed News 7ತೀರ್ಥಹಳ್ಳಿ: ಬಾಂಡ್ಯ-ಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಂಡ್ಯ ಗ್ರಾಮದ ಜಾನ್‌ ಜೋಸೆಫ್‌ ಎಂಬುವವರ ಮನೆ ಸಂಪೂರ್ಣವಾಗಿ ಮಳೆಗೆ ಕುಸಿದಿದೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಮಂಡಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಗಲಕೊಪ್ಪ ಗ್ರಾಮದ ಸಾವಿತ್ರಮ್ಮ ಎಂಬುವವರ ಮನೆಯ ಗೋಡೆ ಕುಸಿದು ಗೃಹೋಪಯೋಗಿ ವಸ್ತುಗಳು ಜಖಂಗೊಂಡಿವೆ.

ಮೆಕ್ಕೆಜೋಳಕ್ಕೆ ಹಾನಿ

Speed News 8ಶಿಕಾರಿಪುರ: ಇಲ್ಲಿನ ಎಪಿಎಂಸಿಯಲ್ಲಿ ಒಣಗಲು ಹಾಕಿದ್ದ 50 ಕ್ವಿಂಟಾಲ್‌ನಷ್ಟು ಮೆಕ್ಕೆ ಜೋಗಳ ಮಳೆ ಸುರಿ ಹಾನಿಯಾಗಿದೆ. ಕೊರಟಗೆರೆಯಲ್ಲಿಯು ಮೆಕ್ಕಜೋಳ ಹಾನಿಯಾಗಿದೆ. ತಾಲೂಕಿನಲ್ಲಿ ಸುಮಾರು 300 ಕ್ವಿಂಟಾಲ್‌ನಷ್ಟು ಮೆಕ್ಕೆ ಜೋಳ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಬೇಗೂರು ಗ್ರಾಮದ ಕಮಲಮ್ಮ ಎಂಬುವವರ ಮನೆ ಕುಸಿದಿದೆ.

https://chat.whatsapp.com/JPJ0lTQsTKf365Fqu6Q7cd

ವಿದ್ಯುತ್‌ ಲೈನ್‌ ಮೇಲೆ ಬಿದ್ದ ರೆಂಬೆ

Speed News 9ಆನಂದಪುರ: ಇಲ್ಲಿನ ಆಚಾಪುರದಲ್ಲಿ ಮಾವಿನ ಮರದ ರೆಂಬೆ ತುಂಡಾಗಿ ವಿದ್ಯುತ್‌ ತಂತಿ ಮೇಲೆ ಬಿದ್ದಿದೆ. ವಿದ್ಯುತ್‌ ಕಂಬಗಳು ಕೂಡ ಹಾನಿಯಾಗಿವೆ. ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಡೆ ವಿದ್ಯುತ್‌ ಲೈನ್‌ ಮೇಲೆ ರೆಂಬೆಗಳು ಬಿದ್ದು ಸುತ್ತಮುತ್ತಲ ಹಳ್ಳಿಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿತ್ತು.

ಹಳ್ಳ, ಕೊಳ್ಳ, ಡ್ಯಾಮ್‌ಗಳಿಗೆ ನೀರು

Speed News 10ವಿವಿಧೆಡೆ ಭಾರಿ ಮಳೆಗೆ ಹಳ್ಳ, ಕೊಳ್ಳಗಳು, ಜಲಾಶಯಗಳಲ್ಲಿ ನೀರಿ ಮಟ್ಟ ಏರಿಕೆಯಾಗಿದೆ. ಲಿಂಗನಮಕ್ಕಿ, ಭದ್ರಾ ಜಲಾಶಯಗಳಿಗೆ ಒಳ ಹರಿವು ಏರಿಕೆಯಾಗಿದೆ. ಆನಂದಪುರದಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಅಮ್ಮನಕೆರೆ ಭರ್ತಿಯಾಗಿದೆ. ಸೊರಬದಲ್ಲಿ ವರದಾ ನದಿ ತುಂಬಿ ಹರಿಯುತ್ತಿದೆ. ಅಂಜನಾಪುರ ಜಲಾಶಯಕ್ಕೆ 250 ಕ್ಯೂಸೆಕ್‌ ಒಳ ಹರಿವು ಇತ್ತು. ನೀರಿನ ಮಟ್ಟ 14 ಅಡಿಗೆ ತಲುಪಿದೆ. ಅಂಬ್ಲಿಗೊಳ ಜಲಾಶಯದ ನೀರಿನ ಮಟ್ಟ 16 ಅಡಿಗೆ ತಲುಪಿದೆ. 300 ಕ್ಯೂಸೆಕ್‌ ಒಳ ಹರಿವು ಇತ್ತು.

ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 17 ಜೂನ್‌ 2025 | ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಇವತ್ತು ಎಷ್ಟಿದೆ ತಾಪಮಾನ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2025

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment