ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಎನ್ಇಎಸ್ ಹವ್ಯಾಸಿ ರಂಗತಂಡದ ವತಿಯಿಂದ ಜೂ.17 ಮತ್ತು 18 ರಂದು ರಷ್ಯಾದ ಖ್ಯಾತ ಬರಹಗಾರ ಆಯ್ಯಂಟನ್ ಚೆಕಾವ್ ಅವರ ಸಣ್ಣ ಕಥೆಗಳನ್ನು ಆಧರಿಸಿದ ಡಾ.ಹೇಮಪಟ್ಟಣಶೆಟ್ಟಿ ವಿರಚಿತ ನಾಟಕ (Drama) ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಜೂ.17 ರ ಸಂಜೆ 6.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಾಟಕ ಪ್ರದರ್ಶನ ನಡೆಯಲಿದೆ. ಜೂ.18 ರಂದು ಕರ್ನಾಟಕ ಸಂಘದಲ್ಲಿ ಸಂಜೆ 6.30ಕ್ಕೆ ಪ್ರದರ್ಶನ ಏರ್ಪಡಿಸಲಾಗಿದೆ.
ಎನ್ಇಎಸ್ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ನಟಿಸಿ, ನಿರ್ದೇಶಿಸಿ, ರಂಗವಿನ್ಯಾಸ ಮಾಡಿದ್ದು, ಭದ್ರಾವತಿಯ ಲಕ್ಷ್ಮೀ ನಾಟಕದ ಪ್ರಸಾಧನ ಮತ್ತು ವಸ್ತ್ರ ವಿನ್ಯಾಸ ನಿರ್ವಹಿಸಲಿದ್ದಾರೆ. ಹರಿಗೆ ಗೋಪಾಲಸ್ವಾಮಿ ಬೆಳಕಿನ ವಿನ್ಯಾಸ ರೂಪಿಸಿದ್ದು, ವಿನ್ಯಾಸ್ ಸಂಗೀತ ನಿರ್ವಹಣೆ ಮಾಡಲಿದ್ದಾರೆ.
ಎನ್ಇಎಸ್ ಸಂಸ್ಥೆಯ ನೌಕರರು ಹಾಗೂ ವಿದ್ಯಾರ್ಥಿಗಳು ಹವ್ಯಾಸಿ ರಂಗತಂಡದ ಮುಖ್ಯ ರುವಾರಿಗಳಾಗಿದ್ದಾರೆ. ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ದಾಸರಕಲ್ಲಹಳ್ಳಿಯಲ್ಲಿ ಬೆಳಗ್ಗೆಯಿಂದ ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು, ಮಕ್ಕಳು, ಕಾರಣವೇನು?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















