ಶಿವಮೊಗ್ಗ: ವಸತಿ ಇಲಾಖೆಯಲ್ಲಿ (Housing) ಭ್ರಷ್ಟಾಚಾರವಾಗಿದೆ ಎಂದು ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದರು. ಇದರ ಆಡಿಯೋ ಬಹಿರಂಗವಾಗಿದ್ದು, ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಇದರ ಬೆನ್ನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವರು ರಾಜೀನಾಮೆ ನೀಡಿ ತನಿಖೆ ಎದುರಿಸಿವುಂತೆ ಸಲಹೆ ನೀಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಸತಿ ಇಲಾಖೆಯಲ್ಲಿನ ಸಮಸ್ಯೆ ಕುರಿತು ಹಿರಿಯ ಸದಸ್ಯರೊಬ್ಬರು ಆಪಾದನೆ ಮಾಡಿದ್ದಾರೆ. ಈ ಹಿನ್ನೆಲೆ ಸಂಬಂಧಿಸಿದ ಸಚಿವರು ರಾಜೀನಾಮೆ ನೀಡಿ, ತನಿಖೆ ಎದುರಿಸುವುದು ಸೂಕ್ತ ಎಂದರು. ಎಂದು ತಿಳಿಸಿದ್ದಾರೆ.

ಈ ಹಿಂದೆ ಹಲವು ಹಗರಣಗಳಾದಾಗ ಸಚಿವರುಗಳು ರಾಜೀನಾಮೆ ನೀಡಿದ್ದರು. ಅಂತೆಯೇ ಅಪಾದನೆ ಕೇಳಿ ಬಂದಿರುವುದರಿಂದ ಸಚಿವರು ರಾಜೀನಾಮೆ ನೀಡಬೇಕು. ತನಿಖೆ ಬಳಿಕ ಪುನಃ ಸಚಿವರಾಗುವುದು ಸೂಕ್ತ ಎಂದರು.
ಇದನ್ನೂ ಓದಿ » ದುಬಾರಿಯಾಯ್ತು ಗೊಬ್ಬರ, ಯುವ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಸಾಲ ಮನ್ನಾಗೆ ಒತ್ತಾಯ


