ಆರಿದ್ರಾ ಮಳೆ, ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹೊಸನಗರ: ತಾಲೂಕಿನಲ್ಲಿ ಆರಿದ್ರಾ ಮಳೆ ಅಬ್ಬರಿಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜೂನ್‌ 25ರಂದು ರಜೆ (Holiday) ಘೋಷಿಸಲಾಗಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಹೊಸನಗರ ತಾಲೂಕಿನ ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್‌ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Rain-General-Image-youth-With-an-Umbrella

ಇನ್ನು, ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮಾನಿ ಜಲಾಶಯದ ವ್ಯಾಪ್ತಿಯಲ್ಲಿ 128 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 146 ಮಿ.ಮೀ, ಹುಲಿಕಲ್‌ನಲ್ಲಿ 122 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 138 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 169 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 64 ಮಿ.ಮೀ ಮಳೆಯಾಗಿದೆ. ತಾಲೂಕಿನ ಹಲವೆಡೆ ಬೆಳಗ್ಗೆಯಿಂದ ಭಾರಿ ಮಳೆ ಸುರಿಯುತ್ತಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

Leave a Comment