ಶಿವಮೊಗ್ಗ: ಆಂಬುಲೆನ್ಸ್ (Ambulance) ತಡೆದು ತಪಾಸಣೆ ಮಾಡಿದಾಗ ಚಾಲಕ ಮದ್ಯ ಸೇವಿಸಿರುವುದು ಮತ್ತು ವಾಹನಕ್ಕೆ ಇನ್ಸುರೆನ್ಸ್ ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆಂಬುಲೆನ್ಸ್ ಚಾಲಕನಿಗೆ ₹13,000 ದಂಡ ವಿಧಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ನಗರದ ಐಬಿ ಸರ್ಕಲ್ ಬಳಿ ಸಂಚಾರ ಪೊಲೀಸರು ವಾಹನಗಳ ತಪಾಸಣೆ ವೇಳೆ ಆಂಬುಲೆನ್ಸ್ ಪರಿಶೀಲಿಸಿದ್ದರು. ಈ ವೇಳೆ ಆಂಬುಲೆನ್ಸ್ ಚಾಲಕ ಮದ್ಯ ಸೇವಿಸಿರುವುದು ಗೊತ್ತಾಗಿತ್ತು. ಅಲ್ಲದೆ ವಾಹನಕ್ಕೆ ಇನ್ಸುರೆನ್ಸ್ ಕೂಡ ಇರಲಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ಆಂಬುಲೆನ್ಸ್ ಚಾಲಕನಿಗೆ ದಂಡ ವಿಧಿಸಿದೆ. ಪಿಎಸ್ಐ ತಿರುಮಲೇಶ್, ಸಿಬ್ಬಂದಿ ಮಂಜುನಾಥ್, ಪ್ರವೀಣ್ ಪಾಟೀಲ್, ಪ್ರಶಾಂತ್, ದಿನೇಶ್ ಮತ್ತು ಹರೀಶ್ ತಪಾಸಣೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






