ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಂಬುಲೆನ್ಸ್ (Ambulance) ತಡೆದು ತಪಾಸಣೆ ಮಾಡಿದಾಗ ಚಾಲಕ ಮದ್ಯ ಸೇವಿಸಿರುವುದು ಮತ್ತು ವಾಹನಕ್ಕೆ ಇನ್ಸುರೆನ್ಸ್ ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆಂಬುಲೆನ್ಸ್ ಚಾಲಕನಿಗೆ ₹13,000 ದಂಡ ವಿಧಿಸಲಾಗಿದೆ.
ಶಿವಮೊಗ್ಗ ನಗರದ ಐಬಿ ಸರ್ಕಲ್ ಬಳಿ ಸಂಚಾರ ಪೊಲೀಸರು ವಾಹನಗಳ ತಪಾಸಣೆ ವೇಳೆ ಆಂಬುಲೆನ್ಸ್ ಪರಿಶೀಲಿಸಿದ್ದರು. ಈ ವೇಳೆ ಆಂಬುಲೆನ್ಸ್ ಚಾಲಕ ಮದ್ಯ ಸೇವಿಸಿರುವುದು ಗೊತ್ತಾಗಿತ್ತು. ಅಲ್ಲದೆ ವಾಹನಕ್ಕೆ ಇನ್ಸುರೆನ್ಸ್ ಕೂಡ ಇರಲಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ಆಂಬುಲೆನ್ಸ್ ಚಾಲಕನಿಗೆ ದಂಡ ವಿಧಿಸಿದೆ. ಪಿಎಸ್ಐ ತಿರುಮಲೇಶ್, ಸಿಬ್ಬಂದಿ ಮಂಜುನಾಥ್, ಪ್ರವೀಣ್ ಪಾಟೀಲ್, ಪ್ರಶಾಂತ್, ದಿನೇಶ್ ಮತ್ತು ಹರೀಶ್ ತಪಾಸಣೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು
















