ವಿದ್ಯಾನಗರದಲ್ಲಿ ಹಾಡಹಗಲೆ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಬಾಗಿಲು ತೆಗದಾಗ ಮಾಲೀಕನಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗೃಹಿಣಿಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಸಿದುಕೊಂಡು ಮನೆ ಬಾಗಿಲಿನ ಚಿಲಕ ಹಾಕಿ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಶಿವಮೊಗ್ಗದ ವಿದ್ಯಾನಗರದ ಗಣಪತಿ ಲೇಔಟ್‌ನಲ್ಲಿ ಈಚೆಗೆ ಘಟನೆ ಸಂಭವಿಸಿದೆ.

ಮನೆಯೊಂದರ ಬಳಿ ಬಂದಿದ್ದ ಸುಮಾರು 35 ವರ್ಷದ ವ್ಯಕ್ತಿಯೊಬ್ಬ ಬಾಗಿಲು ಬಡಿದಿದ್ದಾನೆ. ಮನೆ ಮಾಲೀಕ ನಾಗರಾಜಪ್ಪ ಬಾಗಿಲು ತೆರೆದಾಗ, ‘ಸೈಟ್‌ ಮಾರಾಟಕ್ಕಿದೆಯೇʼ ಎಂದು ಆ ವ್ಯಕ್ತಿ ವಿಚಾರಿಸಿದ್ದ. ನಾಗರಾಜಪ್ಪ ಅವರು ‘ಯಾವುದೇ ಸೈಟ್‌ ಮಾರಾಟಕ್ಕಿಲ್ಲʼ ಎಂದು ತಿಳಿಸಿದ್ದರು.

ಒಳ ನುಗ್ಗಿ, ಚಿನ್ನದ ಚೈನ್‌ ಕಸಿದ

ಕೂಡಲೆ ಮನೆಯೊಳಗೆ ನುಗ್ಗಿದ ವ್ಯಕ್ತಿ, ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದ ನಾಗರಾಜಪ್ಪ ಅವರ ಪತ್ನಿ ರಾಜೇಶ್ವರಿ ಅವರ ಕೊರಳಲ್ಲಿದ್ದ ಚಿನ್ನದ ಸರ ಕಸಿದುಕೊಂಡಿದ್ದಾನೆ. ನಾಗರಾಜಪ್ಪ ಅವರನ್ನು ತಳ್ಳಿ, ಮನೆಯಿಂದ ಹೋಗಿದ್ದಾನೆ. ಅಲ್ಲದೆ ಮನೆ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಸಿಗಂದೂರು ಸೇತುವೆ, ಎರಡನೇ ಹಂತದ ಲೋಡ್‌ ಟೆಸ್ಟ್‌ ಶುರು

ಕಳುವಾದ ಚಿನ್ನದ ಸರ 40 ಗ್ರಾಂ ತೂಕವಿದ್ದು, ಸುಮಾರು 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment