‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಮಸೀದಿಗಳಲ್ಲಿ ಆಜಾನ್ (Azan) ಕೂಗುವುದರಿಂದ ಶಬ್ಧಮಾಲಿನ್ಯ ಉಂಟಾಗುತ್ತಿದೆ. ಹಾಗಾಗಿ ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಹಲವೆಡೆ ಆಜಾನ್‌ ಕೂಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್‌ ಆ್ಯಪ್‌ಗಳನ್ನು ಬಳಸಿ ಆಜಾನ್‌ ಕೂಗುವಂತೆ ಮಸೀದಿಗಳಿಗೆ ಸರ್ಕಾರ ಸೂಚಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಶಬ್ಧಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಅದೇಶ ಪಾಲಿಸುವಂತೆ ಮುಸ್ಲಿಮರಿಗೆ ಸರ್ಕಾರ ಹೇಳಬೇಕು. ಸರ್ಕಾರದ ಆದೇಶದಂತೆ ಮಸೀದಿಗಳು ನಡೆದುಕೊಳ್ಳಬೇಕು ಎಂದರು.

251224 KS Eshwarappa Press meet in Shimoga press trustes

ಹಲವು ರಾಷ್ಟ್ರಗಳಲ್ಲಿ ನಿಷೇಧ

ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಆಜಾನ್ ಕೂಗುವುದನ್ನು ನಿಷೇಧಿಸಲಾಗಿದೆ. ಮಹಾರಾಷ್ಟ್ರದಲ್ಲಿ 1500ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ಸರ್ಕಾರ ತೆರವುಗೊಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಮೊಬೈಲ್‌ನಲ್ಲಿಯೇ ಆಜಾನ್ ಕರೆ ಕೇಳಲು ಅವಕಾಶವಿದೆ. ಇದಕ್ಕಾಗಿ ಕಲೀಂ ಪಠಾಣ್ ಎಂಬುವವರು ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಿದ್ದು, ಇದನ್ನು ಅಳವಡಿಸಿಕೊಂಡರೆ ಆಜಾನ್ ಕಿರಿಕಿರಿ ತಪ್ಪುತ್ತದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.  

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗ ಶಾಸ್ತ್ರಿ, ಕೆ.ಈ. ಕಾಂತೇಶ್, ಇ. ವಿಶ್ವಾಸ್, ನಾಗರಾಜ್, ಮೋಹನ್ ಜಾಧವ್ ಸೇರಿದಂತೆ ಹಲವರು ಇದ್ದರು.

June-2025-Report-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment