ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ಶಿವಮೊಗ್ಗ: ಸಿಟಿ ಬಸ್‌ (City Bus) ಕಂಡಕ್ಟರ್‌ ಒಬ್ಬರ ಮೇಲೆ ಮತ್ತೊಂದು ಬಸ್ಸಿನ ಕಂಡಕ್ಟರ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಗೋಪಾಳದ ಕೊನೆ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಎಸ್‌.ಬಿ.ಎಂ. ಸಿಟಿ ಬಸ್ಸಿನ ಕಂಡಕ್ಟರ್‌ ರಾಘವೇಂದ್ರ ಎಂಬುವವರ ಮೇಲೆ ಹಲ್ಲೆಯಾಗಿದೆ.

ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌

ನಿಲ್ದಾಣದಿಂದ ಬಸ್‌ ತಡವಾಗಿ ಹೊರಟಿದೆ ಎಂದು ಹಿಂದಿನ ಬಸ್ಸಿನ ಕಂಡಕ್ಟರ್‌ ಆರೋಪಿಸಿದ್ದಾರೆ. ಬಸ್‌ ತಡೆದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ ಹಿಂದಿನ ಬಸ್ಸಿನ ಕಂಡಕ್ಟರ್‌ ಮತ್ತು ಆತನ ಸಹಚರರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಟಿಕೆಟ್‌ ಕಲೆಕ್ಷನ್‌ ₹3500 ಹಣ ಕಳುವಾಗಿದೆ ಎಂದು ರಾಘವೇಂದ್ರ ದೂರಿನಲ್ಲಿ ಆರೋಪಿಸಿದ್ದಾರೆ.

Crime-News-General-Image

ಗಾಯಗೊಂಡಿದ್ದ ಕಂಡಕ್ಟರ್‌ ರಾಘವೇಂದ್ರ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

June-2025-Report-Shivamogga-Live

Leave a Comment