ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಸಿಗಂದೂರು ಸೇತುವೆ ಉದ್ಘಾಟನೆ ಬಳಿಕ ಸಾಗರದಿಂದ ಆವಿನಹಳ್ಳಿ ಮಾರ್ಗವಾಗಿ ಉಡುಪಿ, ಮಂಗಳೂರಿಗೆ ಸಾರಿಗೆ ಬಸ್ (Bus) ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಅಣ್ಣಪ್ಪ ಒತ್ತಾಯಿಸಿದ್ದಾರೆ.
ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ ಆಗಲಿದೆ. ವಾಹನಗಳ ಸಂಚಾರ ಸರಾಗವಾಗಲಿದೆ. ಹಾಗಾಗಿ ಆವಿನಹಳ್ಳಿ ಮೂಲಕ ಸಾಗರದಿಂದ ಉಡುಪಿಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಆವಿನಹಳ್ಳಿ, ಹೊಳೆಬಾಗಿಲು, ಸಿಗಂದೂರು, ತುಮರಿ, ಕೊಲ್ಲೂರು, ಕುಂದಾಪುರ, ಉಡುಪಿ ಮೂಲಕ ಮಂಗಳೂರಿಗೆ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಕಲ್ಪಿಸಿದರೆ ಈ ಭಾಗದ ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ವಿದ್ಯಾರ್ಥಿಗಳು, ಆಸ್ಪತ್ರೆಗೆ ಹೋಗಿ ಬರುವವರು ಸೇರಿದಂತೆ ವಿವಿಧ ಕೆಲಸಗಳಿಗೆ ಓಡಾಡುವವರಿಗೆ ಅನುಕೂಲವಾಗಲಿದೆ. ಇದು ಹತ್ತಿರದ ಮಾರ್ಗವಾದ್ದರಿಂದ ಸಮಯವು ಉಳಿತಾಯವಾಗಲಿದೆ ಎಂದು ಅಣ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ನಿಲ್ದಾಣದಲ್ಲಿಯೇ ಸಿಟಿ ಬಸ್ ಕಂಡಕ್ಟರ್ಗಳ ಮಧ್ಯೆ ಕಿರಿಕ್, ಕೈ ಕೈ ಮಿಲಾಯಿಸಿದ ನಿರ್ವಾಹಕರು

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















